Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ – ಬಿಜೆಪಿಯ ನಡುವೆ ‘ಕಲಾವತಿ’ ಕದನ : ಅಷ್ಟಕ್ಕೂ ಯಾರೀ ಕಲಾವತಿ..?

---Advertisement---

 

ನವದೆಹಲಿ : ಸದ್ಯ ರಾಷ್ಟ್ರ ರಾಜಕಾರಣದಲ್ಲಿ ಕಲಾವತಿಯ ವಿಚಾರ ಜೋರಾಗಿ ಸದ್ದು ಮಾಡುತ್ತಿದೆ. ಕಲಾವತಿಗೆ ಸಹಾಯ ಮಾಡಿದ್ದು ನಮ್ಮ ಸರ್ಕಾರ. ನಿಮ್ಮ ರಾಹುಲ್ ಗಾಂಧಿ ಯಾವ ಸಹಾಯವನ್ನು ಮಾಡಿಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರೆ, ಅದಕ್ಕೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ನಾಯಕರು ತಿರುಗೇಟು ನೀಡುತ್ತಿದ್ದಾರೆ.

ಬಿಜೆಪಿ ನಾಯಕ ಅಮಿತ್ ಶಾ ವಿರುದ್ಧ ಆಕ್ರೋಶ ಹೊರ ಹಾಕಿದ್ದು, ರಾಹುಲ್ ಗಾಂಧಿ ಪರ ನಿಂತಿರುವ ಕಾಂಗ್ರೆಸ್ ನಾಯಕರು ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಕಲಾವತಿ ಎಂಬ ಬಡ ಮಹಿಳೆಗೆ ರಾಹುಲ್ ಗಾಂಧಿಯವರು 30 ಲಕ್ಷ ಸಹಾಯ ಮಾಡಿದ್ದು, ಗುಡಿಸಿಲಲ್ಲಿ ಇದ್ದ ಕಲಾವತಿ ಆರ್ಸಿಸಿ ಮನೆಯಲ್ಲಿ ವಾಸವಾಗಿದ್ದಾರೆ ಎಂದು ಟ್ವೀಟ್ ಮಾಡುವ ಜೊತೆಗೆ ರಾಹುಲ್ ಗಾಂಧಿ ನಮಗೆ ಸಹಾಯ ಮಾಡಿದ್ದಾರೆ ಎಂಬ ಕಲಾವತಿಯ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಅಮಿತ್ ಶಾ ನಿನ್ನೆ ಲೋಕಸಭೆಯಲ್ಲಿ ಕಲಾವತಿ ವಿಚಾರ ಪ್ರಸ್ತಾಪ‌ ಮಾಡಿದ್ದಾರೆ. ಲೋಕಸಭೆಯಲ್ಲಿರುವ ಒಬ್ಬ ಸದಸ್ಯರನ್ನು 13 ಬಾರಿ ರಾಜಕೀಯಕ್ಕೆ ಲಾಂಚ್ ಮಾಡಲಾಗಿದೆ. ಆದರೆ ಆ 13 ಬಾರಿಯೂ ವಿಫಲರಾಗಿದ್ದಾರೆ. ಇನ್ನು ಆ ನಾಯಕ ಬುಂದೇಲ್ ಖಂಡ್ ನ ಕಲಾವತಿ ಎಂಬ ಮಹಿಳೆಯ ಗುಡಿಸಲಿಗೆ ಹೋಗಿ ಬಂದಿದ್ದೀರಿ. ಆದರೆ ಆ ಬಡ ಮಹಿಳೆಗೆ ನೀವೇನೂ ನೀಡಿದ್ದೀರಿ ನಿಮ್ಮ ಕಾಂಗ್ರೆಸ್ ಸರ್ಕಾರ ಆ ಕಲಾವತಿಗೆ ಏನು ನೀಡಿದೆ.ಮನೆ, ವಿದ್ಯುತ್ ಎಲ್ಲವನ್ನು ಪ್ರಧಾನಿ ಮೋದಿಯವರು ನೀಡಿದ್ದು ಎಂದಿದ್ದರು. ಈ ವಿಚಾರಕ್ಮೆ ಇಂದು ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment