Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಖಾಸಗಿ ನಿವೇಶನಗಳ ಮಾಲೀಕರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ : ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಸೂಚನೆ

---Advertisement---

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.11) : ನಗರದಲ್ಲಿನ ತ್ಯಾಜ್ಯ ವಿಲೇವಾರಿ ನಿರ್ವಹಣೆ ಹಾಗೂ ಸ್ವಚ್ಛತೆ ಕುರಿತಂತೆ ಪರಿಶೀಲಿಸಲು ಲೋಕಾಯುಕ್ತರಾದ ನ್ಯಾ. ಬಿ.ಎಸ್. ಪಾಟೀಲ್ ಅವರು ಬೆಳ್ಳಂಬೆಳಿಗ್ಗೆಯೇ ನಗರ ಸಂಚಾರ ಕೈಗೊಂಡರು.

ನಗರದ ಹೊಳಲ್ಕೆರೆ ರಸ್ತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಬಳಿಕ ಮೆದೆಹಳ್ಳಿ ರಸ್ತೆ, ಖಾಸಗಿ ಬಸ್ ನಿಲ್ದಾಣ, ಸಂತೆಹೊಂಡ ರಸ್ತೆ, ಬಸವೇಶ್ವರ ಟಾಕೀಸ್ ರಸ್ತೆಗೆ ಭೇಟಿ ನೀಡಿದರು.

ಬಸವೇಶ್ವರ ಟಾಕೀಸ್ ರಸ್ತೆಯ ಗುರುವೈಭವ ಬಳಿಯ ಖಾಲಿ ನಿವೇಶನದಲ್ಲಿ ಕಸ ಹಾಗೂ ಹಸಿ ತ್ಯಾಜ್ಯದ ಸಂಗ್ರಹದ ರಾಶಿ ಬಿದ್ದಿರುವುದನ್ನು ಕಂಡ ಲೋಕಾಯುಕ್ತರು, ನಗರಸಭೆ ಪೌರಾಯುಕ್ತರು ಹಾಗೂ ಆರೋಗ್ಯ ನಿರೀಕ್ಷಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.  ಖಾಲಿ ನಿವೇಶನಗಳು ಕಸ ತುಂಬುವ ತೊಟ್ಟಿಗಳಲ್ಲ.  ಕಸದ ರಾಶಿ ಸಂಗ್ರಹಕ್ಕೆ ಕಾರಣವಾಗುತ್ತಿರುವ ಖಾಸಗಿ ನಿವೇಶನಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಅವರಿಗೆ ಸ್ವಚ್ಛಗೊಳಿಸಲು ಸೂಚಿಸಬೇಕು. ಒಂದು ವೇಳೆ ಸ್ವಚ್ಛಗೊಳಿಸದಿದ್ದಲ್ಲಿ, ದಂಡ ಹಾಕಿ, ನಗರಸಭೆಯಿಂದಲೇ ಸ್ವಚ್ಛಗೊಳಿಸಿ, ಅದರ ಶುಲ್ಕವನ್ನು ನಿವೇಶನದಾರರಿಂದ ವಸೂಲಿ ಮಾಡುವಂತೆ ಸೂಚಿಸಿದರು.

ನಗರದಲ್ಲಿ ಇದುವರೆಗೂ ಇಂತಹ ಎಷ್ಟು ನಿವೇಶನದಾರರ ಮೇಲೆ ಕ್ರಮ ಕೈಗೊಂಡಿದ್ದೀರಿ ಎಂಬ ಬಗ್ಗೆ ಮಾಹಿತಿ ನೀಡಬೇಕು. 03 ದಿನಗಳ ಒಳಗಾಗಿ ಎಲ್ಲವೂ ಸ್ವಚ್ಛವಾಗಬೇಕು,  ಅಲ್ಲದೆ ಪ್ರತಿನಿತ್ಯವೂ ಸ್ವಚ್ಛವಾಗಿಸಬೇಕು ಎಂದು ಸೂಚನೆ ನೀಡಿದರು.  ಈ ಬಗ್ಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು 03 ದಿನಗಳ ಬಳಿಕ ಪರಿಶೀಲಿಸಿ, ವರದಿ ಸಲ್ಲಿಸುವಂತೆ ತಿಳಿಸಿದರು.  ಬಳಿಕ ನಗರದ ಕೆಳಗೋಟೆ, ಗೋಪಾಲಪುರ ರಸ್ತೆ, ಎನ್‍ಹೆಚ್ 04 ಸರ್ವೀಸ್ ರಸ್ತೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ವಾಸುದೇವರಾಮ್, ಡಿವೈಎಸ್‍ಪಿ ಮೃತ್ಯುಂಜಯ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಂಗನಾಥ್, ಪೌರಾಯುಕ್ತ ಶ್ರೀನಿವಾಸ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment