Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಕೃತಿ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ ಮತ್ತು ಉಪನ್ಯಾಸ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, (ಆ.11) : ವಿದ್ಯಾರ್ಥಿಗಳ ಆರೋಗ್ಯ ಬಹಳ ಮುಖ್ಯ. ಮಕ್ಕಳು ಆರೋಗ್ಯವಾಗಿದ್ದರೆ ಶಾಲೆಗೆ ಹಾಜರಾಗುತ್ತಾರೆ ಅವರ ವಿದ್ಯಾಭ್ಯಾಸಕ್ಕೆ ಇದು ಬಹಳ ಮುಖ್ಯ ಎಂದು ಶಾಲೆಯ ಅಧ್ಯಕ್ಷ ಎಂ.ಕೆ. ರವೀಂದ್ರ ಹೇಳಿದರು.

ನಗರದ ಪ್ರಕೃತಿ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ ಮತ್ತು ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಾಲೆಯ ಕಾರ್ಯದರ್ಶಿ ಎಂ.ಕಾರ್ತಿಕ್  ಮಾತನಾಡುತ್ತಾ ಮಕ್ಕಳು ಏನಾದರೂ ಸಾಧಿಸಬೇಕಾದರೆ ಅವರಿಗೆ ಉತ್ತಮ ಆರೋಗ್ಯ, ಅತ್ಯುನ್ನತ ವಿದ್ಯಾಭ್ಯಾಸ ಹಾಗೂ ಆರೋಗ್ಯಕರ ಕಲಿಕಾ ವಾತಾವರಣ ಬೇಕಾಗುತ್ತದೆ. ಕಲಿಕಾ ವಾತಾವರಣ ಹಾಗೂ ಉತ್ತಮ ವಿದ್ಯಾಭ್ಯಾಸವನ್ನು ಶಾಲೆಗಳು ಒದಗಿಸಬಹುದು ಆದರೆ ವಿದ್ಯಾರ್ಥಿಗಳೇ ಅವರವರ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಡಾ.ಜಯಚಂದ್ರ ಅವರು prevention is better than cure ಎಂಬ ನುಡಿಯಂತೆ ವಿದ್ಯಾರ್ಥಿಗಳಿಗೆ ಹಲ್ಲು ಹಾಗೂ ಬಾಯಿಯ ಸ್ವಚ್ಛತೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಬೇಬಿ ಸಿಟ್ಟಿಂಗ್ ನಿಂದ ಏಳನೇ ತರಗತಿಯವರಗೆ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ದಂತ ತಪಾಸಣೆಯನ್ನು ನಡೆಸಿ  ಮಾರ್ಗದರ್ಶನ ನೀಡಲಾಯಿತು.

ದಂತ ತಪಾಸಣಾ ಶಿಬಿರದ ನಂತರ ವಿದ್ಯಾರ್ಥಿಗಳೇ ಖುದ್ದಾಗಿ ಎಲ್ಲರೂ ತಮ್ಮ ಜೇಬಿನಲ್ಲಿದ್ದ ಚಾಕಲೇಟ್, ಚ್ಯೂಯಿಂಗ ಗಮ್ ಗಳನ್ನು ಕಸದ ಡಬ್ಬಿಗೆ ಎಸೆದಿದ್ದು ಒಂದು ಅಚ್ಚರಿ ಹಾಗೂ ಸಂತಸದ ವಿಚಾರ. ಈ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಬ್ಯಾನರ್ ಅನ್ನು ಬಳಕೆಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಪರಿವರ್ತನಾ ಟ್ರಸ್ಟ್‌ನ ಎಲ್ಲಾ ಟ್ರಸ್ಟಿಗಳು ಮತ್ತು ಶಾಲೆಯ ಎಲ್ಲ ಶಿಕ್ಷಕರು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!