Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೌಜನ್ಯ ಕೇಸ್ ಎಲ್ಲಿಗೆ ಬಂತು.. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು..?

Facebook
Twitter
Telegram
WhatsApp

 

ಮಂಗಳೂರು: ಧರ್ಮಸ್ಥಳದ ಸೌಜನ್ಯ ಹತ್ಯೆ ಕೇಸ್ ಮರುತನಿಖೆ ನಡೆಯುತ್ತಿದೆ. ಸೌಜನ್ಯ ಕೊಲೆಯಾಗಿ ಹತ್ತು ವರ್ಷ ಕಳೆದರೂ ಇನ್ನು ಆ ಕೊಲೆಗೊಂದು ನ್ಯಾಯ ಸಿಕ್ಕಿಲ್ಲ. ಹೀಗಾಗಿ ಸೌಜನ್ಯ ಸಾವಿಗೆ ನ್ಯಾಯ ಬೇಕು ಅಂತ ರಾಜ್ಯಾದ್ಯಂತ ಜನ ಒತ್ತಾಯಿಸುತ್ತಿದ್ದಾರೆ. ಈ ಸಂಬಂಧ ಮಾತನಾಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸರ್ಕಾರದ ಮಟ್ಟದಲ್ಲಿ ಮರು ತನಿಖೆಗೆ ತೀರ್ಮಾನವಾಗಲಿದೆ ಎಂದು ತಿಳಿಸಿದ್ದಾರೆ.

ಸೌಜನ್ಯ ಪ್ರಕರಣದ ಮರುತನಿಖೆಯ ವಿಚಾರದಲ್ಲಿ ಸರ್ಕಾರ ಎಲ್ಲವನ್ನು ಗಮನಿಸುತ್ತಿದೆ. ಎಲ್ಲಾ ಕಡೆಗಳಿಂದಾನು ಮಾಹಿತಿ ಪಡೆಯುತ್ತಿದೆ. ಸಿಬಿಐ ಈಗಾಗಲೇ ವರದಿಯನ್ನು ಕೊಟ್ಟಿದೆ. ಆದರೆ ಈಗ ಸಾಕಷ್ಟು ಜನ ಇದರ ಮರುತನಿಖೆಗೆ ಆಗ್ರಹಿಸಿದ್ದಾರೆ. ಇದು ಸರ್ಕಾರದ ಮಟ್ಟದಲ್ಲಿದೆ. ಹೀಗಾಗಿ ಸರ್ಕಾರ ಎಲ್ಲಾ‌ ರೀತಿಯ ಮಾಹಿತಿಯನ್ನು ಪಡೆದುಕೊಳ್ಳುತ್ತಿದೆ. ಸಿಎಂ ಮತ್ತು ಗೃಹ ಇಲಾಖೆ ಕೇಸ್ ನ ಡಿಟೈಲ್ ಬರಲಿದೆ ಎಂದು ತಿಳಿಸಿದೆ. ನಾನು ಕೂಡ ಗೃಹ ಇಲಾಖೆಯಿಂದ ಮಾಹಿತಿ‌ ಪಡೆಯುತ್ತೇನೆ ಎಂದಿದ್ದಾರೆ.

ಸೌಜನ್ಯ ಪ್ರಕರಣದಲ್ಲಿ ಇನ್ನು ನ್ಯಾಯ ಸಿಕ್ಕಿಲ್ಲ. ಅವರ‌ತಂದೆ ತಾಯಿ‌ ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಆರೋಪಿ‌ ಎಂದು ಅರೆಸ್ಟ್ ಆಗಿದ್ದಾತ ಆರೋಪಿಯಾಗಿರಲಿಲ್ಲ. ಇದೀಗ ಸೌಜನ್ಯಾಳ ಸಾವಿಗೆ ನ್ಯಾಯ ಬೇಕು ಅಂತ ಸೋಷಿಯಲ್ ಮೀಡಿಯಾ ಸೇರಿದಂತೆ, ಸಾಕಷ್ಟು ಜನರಿಂದ ಒತ್ತಾಯ ಕೇಳಿ ಬರುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!