Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯೋಗಿ ಸರ್ಕಾರದ ಮೇಲೆ ತೂಗುಗತ್ತಿ : ಎನ್ ಕೌಂಟರ್ ವಿವರ ಕೇಳಿದ ಸುಪ್ರೀಂ ಕೋರ್ಟ್..!

Facebook
Twitter
Telegram
WhatsApp

 

ಉತ್ತರಪ್ರದೇಶ: ಸುಪ್ರೀಂ ಕೋರ್ಟ್ ಇದೀಗ ಯೋಗಿ ಆದಿತ್ಯ ನಾಥ್ ಸರ್ಕಾರಕ್ಕೆ ಕೆಲವೊಂದಿಷ್ಟು ವಿವರಣೆ‌ ಕೇಳಿದೆ. ಎನ್ಕೌಂಟರ್ ವಿವರನ್ನು ನೀಡಲು ಸೂಚನೆ ನೀಡಲಾಗಿದೆ. ಕಳೆದ ಏಪ್ರಿಲ್ ತಿಂಗಳಲ್ಲಿ ಗ್ಯಾಂಗ್ ಸ್ಟಾರ್ ಹಾಗೂ ರಾಜಕಾರಣಿ‌ ಅತಿಕ್ ಹಾಗೂ ಆತನ ಸಹೋದರ ಅಶ್ರಪ್ ಅವರ ಪೊಲೀಸ್ ಕಸ್ಟಡಿ ಸಾವಿನ ಬಗ್ಗೆ ಇದೀಗ ಸುಪ್ರೀಂ ಕೋರ್ಟ್ ಕೇಸನ್ನು ಕೈಗೆತ್ತಿಕೊಂಡಿದೆ.

ಹೀಗಾಗಿ 2017ರಿಂದ ರಾಜ್ಯದಲ್ಲಿ ನಡೆದ 183 ಎನ್ಕೌಂಟರ್ ಗಳ ಬಗ್ಗೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್ ಯುಪಿ ಸರ್ಕಾರಕ್ಕೆ ತಿಳಿಸಿದೆ. ಉತ್ತರ ಪ್ರದೇಶದಲ್ಲಿ ಮಾತ್ರವಲ್ಲದೆ ಇತರ ರಾಜ್ಯಗಳಲ್ಲಿಯೂ ಹೆಚ್ಚುತ್ತಿರುವ ಪೊಲೀಸ್ ಎನ್‌ಕೌಂಟರ್‌ಗಳು ಮತ್ತು ಕಸ್ಟಡಿ ಸಾವಿನ ಪ್ರಕರಣಗಳ ಬಗ್ಗೆ ನ್ಯಾಯಮೂರ್ತಿ ಎಸ್‌ಆರ್ ಭಟ್ ನೇತೃತ್ವದ ಪೀಠವು ಕಳವಳ ವ್ಯಕ್ತಪಡಿಸಿದೆ.

ಜೈಲಿನ ಗೋಡೆಯೊಳಗೆ ಇಂತಹ ಘಟನೆಗಳು ಯಾಕೆ ಸಂಭವಿಸುತ್ತವೆ. ಆರೋಪಿಯ ವಿಚಾತಣೆಯ ಹಂತ ಮತ್ತು ಮಾರ್ಗಸೂಚಿಗಳು ಏನು..? ತನಿಖೆಯ ಸ್ಥಿತಿಗತಿಗಳೇನು..? ಯಾವ ಆರೋಪದ ಮೇಲೆ‌ ತನಿಖೆ‌ ನಡೆಸಲಾಗಿತ್ತು..? ಈ ಬೆಳವಣಿಗೆಗಳು ಒಂದು ರಾಜ್ಯವನ್ನು ಮೀರಿ ಯಾಕೆ ವಿವರಿಸುತ್ತಿವೆ..? ಹೀಗೆ ಹಲವು ಪ್ರಶ್ನೆಗಳನ್ನು ಸುಪ್ರೀಂ ಕೋರ್ಟ್ ಕೇಳಿದೆ. ಇದಕ್ಕೆ ಈಗ ಯೋಗಿ ಸರ್ಕಾರ ದಾಖಲೆಯ ಸಮೇತ ಉತ್ತರ ನೀಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!