Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ತುಮಕೂರಿನ ಮಠದ ಹಿಂಭಾಗ ಕೃಷಿ ಹೊಂಡಕ್ಕೆ ಬಿದ್ದು ಮಕ್ಕಳು ಸಾವು..!

---Advertisement---

 

ನೀರಿರುವ ಕೆರೆ, ಹೊಳೆ ಈ ಥರದ ಜಾಗದಲ್ಲೆಲ್ಲಾ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಫೋಷಕರು ಸೇರಿದಂತೆ ಶಾಲೆಗಳಲ್ಲೂ ಕಿವಿ ಮಾತು ಹೇಳುತ್ತಾರೆ. ಆದರೂ ನೀರಿನಿಂದ ಪ್ರಾಣ ಕಳೆದುಕೊಳ್ಳುವ ಮಕ್ಕಳ ಸಂಖ್ಯೆ ಮುಂದುವರೆಯುತ್ತಲೆ ಇರುತ್ತದೆ. ಇದೀಗ ತುಮಕೂರಿನ ಸಿದ್ಧಗಂಗಾ ಮಠದ ಇಬ್ಬರು ಮಕ್ಕಳು ನೀರಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಡನೆ ನಡೆದಿದೆ.

ಕೈ ತೊಳೆಯುವುದಕ್ಕೆಂದು ಹೋದಾಗ ಈ ದುರ್ಘಟನೆ ನಡೆದಿದೆ. ಕೃಷಿ ಹೊಂಡದಲ್ಲಿ ಬಿದ್ದು ನಾಲ್ವರು ಮೃತ ಪಟ್ಟಿದ್ದಾರೆ. ಸಿದ್ಧಗಂಗಾ ಮಠದ ಹಿಂಭಾಗದಲ್ಲಿ ನೀರಿನ ಕಟ್ಟೆಯಲ್ಲಿ ಈ ದುರ್ಘಟನೆ ನಡೆದಿದೆ. 11 ವರ್ಷದ ಶಂಕರ್, 11 ವರ್ಷದ ಹರ್ಷಿತಾ, 33 ವರ್ಷದ ಲಕ್ಷ್ಮೀ, 40 ವರ್ಷದ ಮಹದೇವಪ್ಪ ಮೃತಪಟ್ಟವರು.

ಮೃತ ಪಟ್ಟ ಇಬ್ಬರು ಮಕ್ಕಳು ಮಠದಲ್ಲಿಯೇ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೈತೊಳೆಯಲೆಂದು ಕೃಷಿ ಹೊಂಡಕ್ಕೆ ತೆರಳುದ್ದಾರೆ. ಕಾಲು ಜಾರಿ ಬಿದ್ದಿದ್ದು ಪೋಷಕರ ಗಮನಕ್ಕೂ ಬಂದಿದೆ. ಮಕ್ಕಳನ್ನು ರಕ್ಷಿಸಲು ಹೋಗಿ ಪೋಷಕರು ನೀರು ಪಾಲಾಗಿದ್ದಾರೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಬಂದಿದ್ದು, ಅಗ್ನಿಶಾಮಕ ಸಿಬ್ಬಂದಿಗೂ ವಿಷಯ ಮುಟ್ಟಿಸಿ, ಸದ್ಯ ಮೃತದೇಹಗಳನ್ನು ಹೊರತೆಗೆದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...