ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ನಟ ಉಪೇಂದ್ರ ಗಾದೆ ಹೇಳುವ ಮೂಲಕ ಒಂದು ಸಮುದಾಯಕ್ಕೆ ಅವಹೇಳನ ಮಾಡಿದ್ದಾರೆ ಎಂದು ಚನ್ನಮ್ಮ ಅಚ್ಚುಕಟ್ಟೆ ಹಾಗೂ ಹಕಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಈ ಕೇಸ್ ಸಂಬಂಧ ಹೈಕೋರ್ಟ್ ನಿಂದ ಸ್ಟೇ ತರಲಾಗಿದೆ. ಬಿಗ್ ರಿಲೀಫ್ ಸಿಕ್ಕಿದೆ ಎಂದು ಸಂತಸ ಪಡುವಾಗಲೇ ಈಗ ಮತ್ತೆ ಬಂಧನಕ್ಕೆ ಒತ್ತಾಯ ಕೇಳಿ ಬಂದಿದೆ.
ಕರ್ನಾಟಕ ರಣಧೀರ ಪಡೆ ಅಧ್ಯಕ್ಷ ಭೈರಪ್ಪ ಹರೀಶ್ ಬಂಧನಕ್ಕೆ ಒತ್ತಡ ಹಾಕಿದ್ದಾರೆ. ನಾನು ದೂರು ನೀಡಿ 48 ಗಂಟೆಯಾದರೂ ಇನ್ನೂ ಯಾಕೆ ಬಂಧಿಸಿಲ್ಲ. ನಾನು ಆಗಸ್ಟ್ 13ರ ಸಂಜೆ ದೂರು ನೀಡಿರುವುದು. ಸದ್ಯ ಅವರು ಸ್ಟೇ ತಂದಿರುವುದು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ. ನಾನು ನೀಡಿರುವ ದೂರಿಗೆ ಯಾವುದೇ ಸ್ಟೇ ತಂದಿಲ್ಲ ಎಂದು ಆಕ್ರೋಶ ಹೊರ ಹಾಕಿದ ಭೈರಪ್ಪ ಹರೀಶ್, ಹಲಸೂರು ಗೇಟ್ ಠಾಣೆಯ ಎಸಿಪಿಯನ್ನು ಭೇಟಿ ಮಾಡಿ ಕೂಡಲೇ, ಅವರ ಹೇಳಿಕೆ ಸಂಬಂಧ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ನಟ ಉಪೇಂದ್ರ ಫೇಸ್ ಬುಕ್ ಲೈವ್ ನಲ್ಲಿ ಮಾತನಾಡುವಾಗ ಗಾದೆ ಮಾತೊಂದನ್ನು ಬಳಕೆ ಮಾಡಿದ್ದರು. ಬಳಿಕ ಈ ಸಂಬಂಧ ಕ್ಷಮೆಯನ್ನು ಕೇಳಿದ್ದರು. ಇದೇ ವಿಚಾರವಾಗಿ ಇಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಕೂಡ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್