Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಯಾವಾಗಿಂದ ಮಳೆ ಆರಂಭವಾಗಲಿದೆ..? ಹವಮಾನ ಇಲಾಖೆ ಹೇಳಿದ್ದೇನು..?

Facebook
Twitter
Telegram
WhatsApp

 

 

ಬೆಂಗಳೂರು: ಈಗಾಗಲೇ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ. ಬೀಜ ಬಿತ್ತನೆ ಮಾಡಿ, ಮಳೆಗಾಗಿ ಕಾಯುತ್ತಿದ್ದಾರೆ. ಈ ಮಧ್ಯೆ ಹವಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.

ಈ ಬಾರಿ ಅಂದುಕೊಂಡಂತೆ ಮುಂಗಾರು ಮಳೆ ಕಾಣಿಸಿಕೊಳ್ಳಲಿಲ್ಲ. ಭಾರತೀಯ ಹವಮಾನ ಸೂಚನೆ ನೀಡಿರುವ ವರದಿಯ ಪ್ರಕಾರ, ಮುಂಗಾರು ಮಳೆ ಸೆಪ್ಟೆಂಬರ್ 1 ರಿಂದ 7 ರ ತನಕ ರಾಜ್ಯಾದ್ಯಂತ ಉತ್ತಮ ಮಳೆಯಾಗಲಿದೆ ಎನ್ನಲಾಗಿದೆ. ಜೂನ್ ನಿಂದ ಇಲ್ಲಿಯವರೆಗೂ ರಾಜ್ಯದಲ್ಲಿ 49.6 ಸೆಂಟಿ ಮೀಟರ್ ಮಳೆಯಾಗಿದೆ. ಅಂದ್ರೆ ವಾಡಿಕೆಗಿಂತ ತೀರಾ ಕಡಿಮೆ‌ ಮಳೆಯಾಗಿದೆ.

ರಾಜ್ಯದಲ್ಲಿ ಸೆಪ್ಟೆಂಬರ್ ನಲ್ಲಿ ಏಳು ದಿನಗಳ ಮಳೆಯಾಗುವುದರಿಂದ 5 ಎಂಎಂ ನಿಂದ 10 ಮೀಮೀ ಮಳೆಯಾಗಲಿದೆ. ಈ ಮೂಲಕ ಒಂದು ವಾರಗಳ ಕಾಲ ಮಳೆಯಾದರೆ ರೈತರು ಕೊಂಚ ಚೇತರಿಸಿಕೊಳ್ಳುವ ಮಟ್ಟಿಗೆ ಭೂಮಿ ಹಸಿಯಾಗುತ್ತದೆ.

ಮಾನ್ಸೂನ್ ಮಾರುತಗಳು ಹಿಮಾಲಯದ ತಪ್ಪಲಿಗೆ ಸ್ಥಳಾಂತರಗೊಂಡಿದೆ. ಇದು ಕರ್ನಾಟಕದಲ್ಲಿ, ವಿಶೇಷವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಕಡಿಮೆಯಾಗಲು ಕಾರಣವಾಗಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಆಂತರಿಕ ಕರ್ನಾಟಕ ಕ್ರಮವಾಗಿ 11% ಮತ್ತು 23% ನಷ್ಟು ಮಳೆ ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಮಳೆಯಿಲ್ಲದ ಕಾರಣ ರಾಜ್ಯ ಸರ್ಕಾರ ಬರ ರಾಜ್ಯ ಎಂದು ಘೋಷಣೆ‌ ಮಾಡುವುದಕ್ಕೂ ಸಾಧ್ಯವಾಗಿಲ್ಲ. ಕೇಂದ್ರ ಸರ್ಕಾರದಿಂದ ಕೆಲವು ನಿಯಮಗಳ ಸಡಿಲಿಕೆ ಅಗತ್ಯವಿದೆ. ಇನ್ನು ಹೀಗೆ ಮಳೆ ಆಕಾಶಕ್ಕೆ ಸೇರಿದರೆ ತರಕಾರಿ, ಆಹಾರ ಪದಾರ್ಥಗಳು ಹೆಚ್ಚಾಗುವ ಸಾಧ್ಯತೆ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!