Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಾರೇ ಕಾಂಗ್ರೆಸ್ ಗೆ ವಾಪಾಸಾದರೂ ರಮೇಶ್ ಜಾರಕಿಹೊಳಿ ಮಾತ್ರ ಆಗಲ್ಲ : ಅದಕ್ಕೆ ಕಾರಣ ಇಲ್ಲಿದೆ..!

Facebook
Twitter
Telegram
WhatsApp

 

ಬೆಳಗಾವಿ : ಸದ್ಯ ರಾಜ್ಯ ರಾಜಕಾರಣದಲ್ಲಿ ಘರ್ ವಾಪಾಸಿ ಎಂಬುದು ಜೋರು ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ನಿಂದ ಬಿಜೆಪಿಗೆ ಹೋದವರು ಮತ್ತೆ ಮರಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದಾಗ ಸರ್ಕಾರ ಕೆಡವಿ ಬಿಜೆಪಿ ಸೇರಿದ್ದರು. ಆ ಟೀಮ.ಗೆ ಬಾಂಬೆ ಟೀಂ ಅಂತಾನು ಕರೆಯಲಾಗಿತ್ತು. ಆ ಟೀಂನಲ್ಲಿ ರಮೇಶ್ ಜಾರಕಿಹೊಳಿ ಕೂಡ ಪ್ರಮುಖ ಪಾತ್ರ ವಹಿಸಿದ್ದವರು.

ಇದೀಗ ಒಂದಷ್ಟು ಶಾಸಕರು ವಾಪಾಸಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆ ರಮೇಶ್ ಜಾರಕಿಹೊಳಿ ಏನು ಮಾಡ್ತಾರೆ ಎಂಬ ಚರ್ಚೆಗಳು ಶುರುವಾಗಿದೆ. ಒಂದು ಮಾಹಿತಿಯ ಪ್ರಕಾರ ಯಾರೇ ವಾಪಾಸ್ ಕಾಂಗ್ರೆಸ್ ಗೆ ಹೋದರೂ ಕೂಡ ರಮೇಶ್ ಜಾರಕಿಹೊಳಿ ಮಾತ್ರ ವಾಪಾಸ್ ಹೋಗೋದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.

ಅದರ ಬದಲು ಬಿಜೆಪಿಯಲ್ಲಿ ಇದ್ದುಕೊಂಡೆ, ಪಕ್ಷ ಸಂಘಟನೆ ಮಾಡಿದರೆ, ಇಲ್ಲಿಯೇ ಒಳ್ಳೆಯ ಅಧಿಕಾರ ತಮ್ಮದಾಗುತ್ತದೆ ಎಂಬ ಅಭಿಪ್ರಾಯ ಹೊಂದಿದ್ದಾರೆ. ಅದಕ್ಕಾಗಿಯೇ ಬಿಜೆಪಿ ಪಕ್ಷದ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಭೇಟಿಯಾಗಿ, ಮುಕ್ತವಾಗಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಅದುವೆ ಪಕ್ಷ ಸಂಘಟನೆಯ ಬಗ್ಗೆ.

ಇನ್ನು ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಪಕ್ಷ ಸಂಘಟನೆ ಹಾಗೂ ಪಕ್ಷದ ಗೆಲುವುಗಾಗಿ ದುಡಿಯಲು ಹೊರಟಿದ್ದಾರೆ ರಮೇಶ್ ಜಾರಕಿಹೊಳಿ. ಜೊತೆಗೆ ಬಿಜೆಪಿಯಲ್ಲಿಯೇ ಇರುವುದಕ್ಕೆ ಹಲವು ಕಾತಣಗಳು ಇದೆ. ಕಾಂಗ್ರೆಸ್ ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಡಿಕೆ ಶಿವಕುಮಾರ್ ಪ್ರಾಬಲ್ಯವನ್ನು ಸಹಿಸಿಕೊಳ್ಳಬೇಕಾಗುತ್ತದೆ. ಈಗಂತು ಬೆಳಗಾವಿಯಲ್ಲಿ ನಾನಾ ನೀನಾ ಎಂಬಂತಿದ್ದಾರೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ. ಬಿಟ್ಟು ಬಂದ ಪಕ್ಷವನ್ನೇ ಮತ್ತೆ ಸೇರಿದರೆ ಗೌರವ ಇರಲ್ಲ ಅನ್ನೋದು ರಮೇಶ್ ಜಾರಕಿಹೊಳಿ ಅವರ ಅಭಿಪ್ರಾಯವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!