ಚಿಕ್ಕಬಳ್ಳಾಪುರ: ರಾಜ್ಯದೆಲ್ಲೆಡೆ ಮಳೆ ನಾಪತ್ತೆಯಾಗಿದೆ. ಮಳೆ ಸರಿಯಾದ ಸಮಯಕ್ಕೆ ಬಂದಿದ್ದರೆ, ಇಷ್ಟೊತ್ತಿಗೆ ಹೊಲದಲ್ಲಿ ಬೀಜ ಮೊಳಕೆಯೊಡೆಯಬೇಕಿತ್ತು. ಆದರೆ ಮಳೆ ಗಗನ ಕುಸುಮವಾಗಿದೆ. ರೈತನ ನಿರೀಕ್ಷೆಯನ್ನೇ ಹುಸಿಗೊಳಿಸಿದೆ. ಮಳೆ ಬಾರದೆ ಇದ್ದಲ್ಲಿ ಸರ್ಕಾರ ಮೋಡ ಬಿತ್ತನೆ ಮಾಡುವ ಸಂಪ್ರದಾಯವಿಟ್ಟುಕೊಂಡಿದೆ. ಇತ್ತ ಜನ ಕೂಡ ಮಳೆಗಾಗಿ ಕಪ್ಪೆಗಳ ಮದುವೆ ಮಾಡಿಸುತ್ತಾರೆ. ಆದ್ರೆ ಚಿಕ್ಕಬಳ್ಳಾಪುರದಲ್ಲಿ ತುಂಬಾ ವಿಚಿತ್ರವಾದ ಸಂಪ್ರದಾಯವೊಂದು ಇದೆ.
ಬಾಗೇಪಲ್ಲಿಯ ಮಾಡಪ್ಪಲ್ಲಿಯ ಗ್ರಾಮದಲ್ಲಿನ ಜನ ಮಳೆಗಾಗಿ ದೇವರನ್ನೇ ಸುಡುತ್ತಾರೆ. ಮಳೆಗಾಗಿ ದೇವರನ್ನೇ ಸುಟ್ಟಿದ್ದಾರೆ. ಊರಿನ ಜನರು ಗ್ರಾಮದೇವತೆಗಳಿಗೆ ಬೆಂಕಿ ಹಚ್ಚಿ, ಪ್ರಾರ್ಥನೆ ಸಲ್ಲಿಸಿದ್ದಾರೆ. ವಿಶೇಷ ಅಂದ್ರೆ ಮದುವೆಯಾಗದ ಯುವಕರಿಂದ ಈ ಆಚರಣೆ ಮಾಡಿಸಿದ್ದಾರೆ. ಈ ರೀತಿ ಆಚರಣೆ ಮಾಡುವುದರಿಂದ ಮಳೆ ಬರುತ್ತೆ ಎಂದೇ ಇಲ್ಲಿನ ಮಂದಿ ನಂಬಿದ್ದಾರೆ.
ಹೀಗಾಗಿ ಇಲ್ಲಿನ ವಿಚಿತ್ರ ಸಂಪ್ರದಾಯ ಕಂಡು ಎಲ್ಲರು ಅಚ್ಚರಿಗೊಂಡಿದ್ದಾರೆ. ಗ್ರಾಮದೇಚತೆಗಳನ್ನು ಸುಡುವಾಗ ಗಂಗಮ್ಮನ ಸುಡ್ರೋ.. ಚೌಡೇಶ್ವರಿಯನ್ನು ಸುಡ್ರೋ ಅಂತೆಲ್ಲಾ ಘೋಷಣೆ ಕೂಗಿದ್ದಾರೆ. ಈ ರೀತಿ ಕೂಗಿಕೊಂಡು ಆಚರಣೆ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












