Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರಿಗಾಗಿ ಸರ್ಕಾರದಿಂದ ಬರ್ತಿದೆ ಹೊಸ ಆ್ಯಪ್ : ಇದರಲ್ಲಿ ಏನೆಲ್ಲಾ ಮಾಹಿತಿ ಸಿಗಲಿದೆ..?

Facebook
Twitter
Telegram
WhatsApp

 

ಬೆಂಗಳೂರು: ಕಾಲ ಬದಲಾದಂತೆ, ವಾತಾವರಣ ಬದಲಾದಂತೆ ಕೃಷಿಯ ಮಾದರಿಯೂ ಬದಲಾಗಬೇಕಾದ ಅನಿವಾರ್ಯತೆ ಇದೆ. ಆದ್ರೆ ರೈತರಿಗೆ ಈ ವಿಚಾರದಲ್ಲಿ ಸಾಕಷ್ಟು ಮಾರ್ಗದರ್ಶನದ ಅಗತ್ಯತೆಯೂ ಇದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕೃಷಿ ಸಂಬಂಧಿಸಿದಂತೆ ಆ್ಯಪ್ ಬರಲಿದೆಯಂತೆ. ಈ ಸಂಬಂಧ ಸಚಿವ ಚೆಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ.

ಕೃಷಿಗೆ ಸಂಬಂಧಿಸಿದಂತೆ ಬುದ್ದಿ ಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಆ್ಯಪ್ ಒಂದನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಿದ್ದೇವೆ. ಈ‌ ಮೂಲಕ ಹವಮಾನ ಮತ್ತು‌ ಮಣ್ಣಿನ ಗುಣಮಟ್ಟ ತಿಳಿದುಕೊಳ್ಳುವುದಕ್ಕೆ ಸುಲಭವಾಗಿ ಮಾಹಿತಿ ಸಿಗಲಿದೆ. ಇದು ಎಐ ಆಧಾರಿತ ಸೂಪರ್ ಆ್ಯಪ್ ಮೂಲಕ ಸಾಧ್ಯವಾಗುತ್ತದೆ. ಬೀಜ, ಬೆಳೆ ಮಾದರಿ ಸೇರಿದಂತೆ ಹಲವು ವಿಚಾರಗಳಿಗೆ ಈ ಆ್ಯಪ್ ಉಪಯೋಗವಾಗಲಿದೆ ಎಂದಿದ್ದಾರೆ.

ಕೃತಕ ಬುದ್ಧಿಮತ್ತೆ ಆಧಾರಿತ ಆ್ಯಪ್​ಗೆ ಫೀಡ್ ಮಾಡಬಹುದಾಗಿದೆ. ಇದು ರೈತರ ಅಗತ್ಯಗಳಿಗೆ ಅನುಗುಣವಾಗಿ ಮಾಹಿತಿಯನ್ನು ಒದಗಿಸಲಿದೆ. ಇದಲ್ಲದೆ, ಈ ಆ್ಯಪ್ 14 ಭಾಷೆಗಳಲ್ಲಿ ಕಾರ್ಯನಿರ್ವಹಿಸಲಿದೆ. ಈಗಿರುವ ಕಾಲ್ ಸೆಂಟರ್ ಗಳು ರೈತರಿಗೆ ಸಹಾಯ ಮಾಡುವುದಕ್ಕಿಂತ ಹೆಚ್ಚಿನ ಗೊಂದಲವನ್ನು ಉಂಟುಮಾಡುತ್ತಿದ್ದವು. ಆದ್ದರಿಂದ, ನಾವು ಈ ಎಲ್ಲಾ ಸಹಾಯವಾಣಿಗಳನ್ನು ವಿಲೀನಗೊಳಿಸಲು ಮತ್ತು ರೈತರಿಗೆ ಮಾಹಿತಿ ನೀಡಲು ಕಾಲ್ ಸೆಂಟರ್ ಅನ್ನು ಸ್ಥಾಪಿಸಲು ನಿರ್ಧರಿಸಿದ್ದೆವು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

ರೋಟರಿ ಕ್ಲಬ್‍ನಿಂದ ನಡೆಯುವ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಿ : ರೊ.ಕನಕರಾಜ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ‌ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 19  : ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತು ಬೇರೊಂದಿಲ್ಲ. ಹಾಗಾಗಿ ಪ್ರತಿಯೊಬ್ಬರು ಆರೋಗ್ಯದ ಕಡೆ ಗಮನ ಕೊಡಬೇಕೆಂದು

error: Content is protected !!