Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಳೆ ಬಂತು, ಆಟ ನಿಲ್ತು, ಆದರೂ ಭಾರತ ಗೆಲ್ತು, ಅದು ಹೇಗೆ ? ಭಾರತ – ಐರ್ಲೆಂಡ್‌ ಮೊದಲ ಟಿ 20 ಪಂದ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ…!

---Advertisement---

 

 

ಸುದ್ದಿಒನ್

ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಭಾರತ 2 ರನ್‌ಗಳಿಂದ ಗೆದ್ದುಕೊಂಡಿದೆ. ಮೂರು ಟಿ20 ಪಂದ್ಯಗಳ ಸರಣಿಯ ಅಂಗವಾಗಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ನಿಗಧಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿತು. 140 ರನ್ ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಭಾರತ 6.5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 47 ರನ್ ಗಳಿಸಿದ್ದಾಗ ಮಳೆ ಅಡ್ಡಿಪಡಿಸಿತು. ಆ ಬಳಿಕ ಪಂದ್ಯ ಮುಂದುವರಿಸುವ ಸ್ಥಿತಿ ಇಲ್ಲದ ಕಾರಣ ಡಕ್‌ವರ್ತ್‌ ಲೂಯಿಸ್‌ ನಿಯಮದ ಪ್ರಕಾರ ಭಾರತ 2 ರನ್‌ಗಳ ಜಯ ಸಾಧಿಸಿದೆ ಎಂದು ಪ್ರಕಟಿಸಲಾಯಿತು.

ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ ತಂಡ ಭಾರತದ ಬೌಲರ್ ಗಳ ದಾಳಿಗೆ ತತ್ತರಿಸಿತು. ಆರಂಭದಿಂದಲೂ ಒಂದರ ಮೇಲೊಂದು ವಿಕೆಟ್ ಕಳೆದುಕೊಂಡಿತು.  6.3 ಓವರ್ ಗಳಲ್ಲಿ 5 ವಿಕೆಟ್ (31 ರನ್) ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ, ಕೊನೆಯಲ್ಲಿ ಬ್ಯಾರಿ ಮೆಕಾರ್ಥಿ (51 ರನ್, 33 ಎಸೆತ, 4 ಬೌಂಡರಿ, 4 ಸಿಕ್ಸರ್) ಮತ್ತು ಕರ್ಟಿಸ್ ಕಾಂಫರ್ (39 ರನ್, 33 ಎಸೆತ, 3 ಬೌಂಡರಿ, 1 ಸಿಕ್ಸರ್) ಅಬ್ಬರದ ಬ್ಯಾಟಿಗ್ ನಿಂದಾಗಿ ಐರ್ಲೆಂಡ್ 139 ಸ್ಕೋರ್ ದಾಖಲಿಸಿತು. ಈ ಇಬ್ಬರ ಜೊತೆಯಾಟದಿಂದ 90 ರನ್ ಗಳಿಸಿದರು. ತಂಡದ ಉಳಿದವರು ಒಟ್ಟಾಗಿ ಗಳಿಸಿದ್ದು 42 ರನ್ ಮಾತ್ರ ಎಂಬುದು ಗಮನಾರ್ಹ

ಗುರಿ ತಲುಪುವ ನಿಟ್ಟಿನಲ್ಲಿ ಭಾರತದ ಯುವ ಆಟಗಾರರಾದ ಯಶಸ್ವಿ ಜೈಸ್ವಾಲ್ (24) ಮತ್ತು ರುತುರಾಜ್ ಗಾಯಕ್ವಾಡ್ (ಅಜೇಯ 19) ಉತ್ತಮ ಆರಂಭ ನೀಡಿದರು. ಇಬ್ಬರೂ ಆಕ್ರಮಣಕಾರಿ ಆಟವಾಡಿದ್ದರಿಂದ ಪವರ್ ಪ್ಲೇ ಅಂತ್ಯಕ್ಕೆ ಭಾರತ 45/0 ರನ್ ಗಳಿಸಿದರು.

ಕ್ರೇಗ್ ಯಂಗ್ ಎಸೆದ ಏಳನೇ ಓವರ್‌ನಲ್ಲಿ ಜೈಸ್ವಾಲ್ ಮತ್ತು ತಿಲಕ್ ವರ್ಮಾ (0) ಕ್ರಮವಾಗಿ ಔಟಾದರು. ಅದೇ ಓವರ್‌ನ ಕೊನೆಯ ಎಸೆತದಲ್ಲಿ ಮಳೆ ಸುರಿಯಲಾರಂಭಿಸಿ ಆಟ ಸ್ಥಗಿತಗೊಂಡಿತು. ಬಳಿಕ ಮಳೆ ಕಡಿಮೆಯಾಗದ ಕಾರಣ ಡಕ್‌ವರ್ತ್ ಲೂಯಿಸ್ ಪ್ರಕಾರ ಭಾರತವನ್ನು ವಿಜಯಿ ಎಂದು ಘೋಷಿಸಲಾಯಿತು.

ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಸುದೀರ್ಘ ವಿರಾಮದ ನಂತರ ಫಾರ್ಮ್‌ ಗೆ ಮರಳಿದರು ಮತ್ತು ತೀಕ್ಷ್ಣವಾದ ಎಸೆತಗಳಿಂದ ಐರ್ಲೆಂಡ್‌ನ ಬ್ಯಾಟ್ಸ್‌ಮನ್‌ಗಳನ್ನು ಸಂಕಷ್ಟಕ್ಕೆ ಸಿಲುಕಿಸಿ
2 ವಿಕೆಟ್ ಪಡೆದರು. ಪ್ರಸಿದ್ಧ್ 2, ರವಿ ಬಿಷ್ಣೋಯ್ 2, ಅರ್ಷದೀಪ್ ಸಿಂಗ್ 1 ವಿಕೆಟ್ ಪಡೆದರು.

ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ಅಲ್ಲದೆ, 11 ತಿಂಗಳ ನಂತರ ಟೀಂ ಇಂಡಿಯಾಗೆ ಮರಳಿರುವ ಜಸ್ಪ್ರೀತ್ ಬುಮ್ರಾ ಅವರು ನಾಯಕತ್ವದ ಮೊದಲ ಪಂದ್ಯದಲ್ಲೇ ತಂಡಕ್ಕೆ ಜಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಎರಡನೇ ಟಿ20 ಭಾನುವಾರ ನಡೆಯಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...