Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾಸನ ಜಿಲ್ಲೆಯ ಶಾಲೆಗಳಲ್ಲಿ ಬಿಸಿಯೂಟ ಸ್ಥಗಿತ : ಮನೆಯಿಂದ ಊಟ ತರುವಂತೆ ಸೂಚನೆ..!

Facebook
Twitter
Telegram
WhatsApp

 

ಹಾಸನ: ಹಲವು ವರ್ಷಗಳಿಂದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ನೀಡಲಾಗುತ್ತಿದೆ. ಆದ್ರೆ ಹಾಸನದ ಬಹುತೇಕ ಶಾಲೆಗಳಲ್ಲಿ ಬಿಸಿಯೂಟ ಸ್ಥಗಿತಗೊಂಡಿದೆ ಎನ್ನಲಾಗುತ್ತಿದೆ. ಹೀಗಾಗಿ ಶಿಕ್ಷಕರು ಕೂಡ ಮಕ್ಕಳಿಗೆ ಮನೆಯಿಂದಾನೇ ಊಟ ತರುವಂತೆ ಸೂಚನೆ ನೀಡಿದ್ದಾರೆ.

ಶಾಲಾ‌ ಮಕ್ಕಳಿಗೆ ನೀಡುವ ಬಿಸಿಯೂಟದ ರೇಷನ್ ವ್ಯತ್ಯಯವಾಗುತ್ತಿರುವ ಹಿನ್ನೆಲೆ ಬಹುತೇಕ ಶಾಲೆಗಳಲ್ಲಿ ಬಿಸಿಯೂಟ ಸಿಗುತ್ತಿಲ್ಲ. ಅಕ್ಕಿ, ಬೇಳೆ ಸೇರಿದಂತೆ ಅಡುಗೆಗೆ ಬೇಕಾದ ಯಾವ ಪದಾರ್ಥವೂ ಸಪ್ಲೈ ಆಗುತ್ತಿಲ್ಲ. ಹೀಗಾಗಿ ಶಾಲೆಯ ಶಿಕ್ಷಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ 20 ದಿನದಿಂದ ಈ ಸಮಸ್ಯೆ ಶಾಲೆಗಳಲ್ಲಿ ಕಾಡುತ್ತಿದೆ. ಹೀಗಾಗಿ ಮಕ್ಕಳು ಹಸಿದುಕೊಂಡು ಇರಬಾರದು ಎಂಬ ಕಾರಣಕ್ಕೆ‌ ಶಿಕ್ಷಕರು‌ ಮಕ್ಕಳಿಗೇನೆ ಸೂಚನೆ ನೀಡಿದ್ದಾರೆ. ಮನೆಯಿಂದಾನೇ ಬಾಕ್ಸ್ ತನ್ನಿ ಎಂದಿದ್ದಾರೆ.

ಈ ಕಡೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಹತ್ತು ಕೆಜಿ ಅಕ್ಕಿ ನೀಡುತ್ತೇವೆ ಎಂದು ಸೂಚನೆ ನೀಡಿತ್ತು. ಆದ್ರೆ ಕೇಂದ್ರ ಸರ್ಕಾರದಿಂದ ಬೆಂಬಲ ಸಿಗುತ್ತಿಲ್ಲ. ಅಕ್ಕಿ ಬದಲು ಹಣ ಕೊಡ್ತೇವೆ ಎಂದಿದ್ದಾರೆ. ಈಗ ಬಿಸಿಯೂಟದ ರೇಷನ್ ಗೂ ತಾಪತ್ರಯ ಎದುರಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!