Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಲಿತ ಸಚಿವರ ವಿರೋಧದ ನಡುವೆಯೂ ಸುಧಾಮ್ ದಾಸ್ ನಾಮನಿರ್ದೇಶನಕ್ಕೆ ಹೈಕಮಾಂಡ್ ಅಸ್ತು ಎಂದಿದ್ದೇಕೆ..?

Facebook
Twitter
Telegram
WhatsApp

 

 

ಬೆಂಗಳೂರು: ವಿಧಾನಪರಿಷತ್ ನಾಮನಿರ್ದೇಶನಕ್ಕೆ ಇದೀಗ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಅದುವೆ ಸುಧಾಮ್ ದಾಸ್ ಗೆ ಓಕೆ‌ ಎಂದಿದೆ. ಆದ್ರೆ ಸುಧಾಮ್ ದಾಸ್ ನಾಮನಿರ್ದೇಶನಕ್ಕೆ‌ ಕಾಂಗ್ರೆಸ್ ನಲ್ಲಿಯೇ ವಿರೋಧವಿತ್ತು. ದಲಿತ ಸಚಿವರೆಲ್ಲಾ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೂ ವಿರೋಧದ ನಡುವೆಯೇ ನಾಮನಿರ್ದೇಶನಕ್ಕೆ ಹೈಕಮಾಂಡ್ ಅಸ್ತು ಎಂದಿದ್ದಾರೆ.

ಸಚಿವ ಜಿ ಪರಮೇಶ್ವರ್, ಮುನಿಯಪ್ಪ, ಮಹದೇವಪ್ಪ, ತಿಮ್ಮಾಪುರ ಅವರ ವಿರೋಧವಿತ್ತು.‌ ಸುಧಾಮ್ ದಾಸ್ ನಾಮನಿರ್ದೇಶನ ವಿರೋಧಿಸಿ, ಹೈಕಮಾಂಡ್ ಗೆ ಪತ್ರ ಬರೆದಿದ್ದರು. ಆದ್ರೆ ಹೈಕಮಾಂಡ್ ಆ ಪತ್ರಕ್ಕೆ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಸುಧಾಮ್ ದಾಸ್ ಅವರನ್ನೇ ಆಯ್ಕೆ ಮಾಡಲು ಸೂಚಿಸಿದೆ.

ಈ ಮೊದಲು ಇಡಿ ಅಧಿಕಾರಿಯಾಗಿದ್ದ ಸುಧಾಮ್ ದಾಸ್, ಇತ್ತಿಚೆಗಷ್ಟೇ ಕಾಂಗ್ರೆಸ್ ಸೇರಿದ್ದರು. ಹಿರಿಯ ಸಚಿವರ ವಿರೋಧ ನಡುವೆಯೂ ಆಯ್ಕೆಯಾಗಿದ್ದಾರೆ. ಸುಧಾಮ್ ದಾಸ್ ಬಗ್ಗೆ ಹಿರಿಯ ಸಚಿವರು ಹೇಳಿದಂತೆ, ಹೆಸರನ್ನ ಅಂತಿಮಗೊಳಿಸುವಾಗ ನಮ್ಮ ಅಭಿಪ್ರಾಯ ಸಂಗ್ರಹಿಸದೇ ಇರೋದ್ರಿಂದ ಬೇಸರವಾಗಿದೆ. ಪ್ರಾದೇಶಿಕ ಸಮಾನತೆ, ಸಾಮಾಜಿಕ ನ್ಯಾಯ ಪಾಲಿಸಬೇಕಿತ್ತು. ಪಕ್ಷ ಸಂಘಟನೆಯಲ್ಲಿ ಸುಧಾಮ್​ ದಾಸ್ ಅವರ​ ಸೇವೆ ಇಲ್ಲವೇ ಇಲ್ಲ. ಕಳೆದ ವಿಧಾನಸಭೆ ಚುನಾವಣೆಲ್ಲೂ ಸುಧಾಮ್‌ ದಾಸ್‌ ಅವರು ಕೆಲಸ ಮಾಡಿಲ್ಲ. ಹೀಗಾಗಿ ಸುಧಾಮ್​ ದಾಸ್​​ ಪರಿಷತ್​ ಆಯ್ಕೆಯನ್ನ ನಾವು ವಿರೋಧಿಸ್ತೇವೆ ಎಂದಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!