Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕುಮಾರ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ‌ ಮಧು‌ ಬಂಗಾರಪ್ಪ ಹೇಳಿದ್ದೇನು..?

---Advertisement---

 

 

ಬೆಂಗಳೂರು: ಹಲವು ದಿನಗಳಿಂದ ಬಿಜೆಪಿ‌ ಮತ್ತು ಜೆಡಿಎಸ್ ನಲ್ಲಿರುವವರು ಕೂಡ ಕಾಂಗ್ರೆಸ್ ಸೇರಲಿದ್ದಾರೆ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ನಿಂದ ಹೋದವರು‌ ಕೂಡ ಕಾಂಗ್ರೆಸ್ ಅನ್ನೇ ಸೇರುತ್ತಾರೆ ಎಂಬ ಮಾತಿದೆ. ಈ ಮಧ್ಯೆ ಜೆಡಿಎಸ್ ಬಿಟ್ಟು ಕುಮಾರ ಬಂಗಾರಪ್ಪ ಕಾಂಗ್ರೆಸ್ ಗೆ ಬರಲಿದ್ದಾರಾ ಎಂಬ ಚರ್ಚೆಯ ನಡುವೆ ಮಧು ಬಂಗಾರಪ್ಪ ಪರೋಕ್ಷವಾಗಿ ಉತ್ತರ ನೀಡಿದ್ದಾರೆ.

ಇಡೀ ರಾಜ್ಯದಲ್ಲಿ ಯಾರೇ ಕಾಂಗ್ರೆಸ್ ಗೆ ಬಂದರೂ ನನಗಂತೂ ಯಾವ ಅಭ್ಯಂತರವೂ ಇಲ್ಲ. ಸಿಎಂ ಮತ್ತು ಡಿಸಿಎಂ ನಿರ್ಧಾರ ಮಾಡ್ತಾರೆ ಯಾರೂ ಬರಬೇಕು ಎಂಬುದನ್ನು. ನಾನೊಬ್ಬ ಓಬಿಸಿ ಘಟಕದ ಅಧ್ಯಕ್ಷನಾಗಿ ಹೇಳ್ತೇನೆ. ಇಡೀ ರಾಜ್ಯದಲ್ಲಿ ಪಕ್ಷ ಬೆಳೆಯಬೇಕು. ಸೊರಬ ಸೇರಿದಂತೆ ರಾಜ್ಯದ ಯಾವ ಮೂಲೆಯಿಂದ ಪಕ್ಷಕ್ಕೆ ಬಂದರೂ ಅಭ್ಯಂತರವಿಲ್ಲ.

ನಿರ್ಧಾರದ ಕೀಲಿ ಕೈ ನನ್ನ ಬಳಿ ಇಲ್ಲ. ಅಧ್ಯಕ್ಷರ ಕೈನಲ್ಲಿ ಕೀಲಿ‌ಇದೆ. ಅವರ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ. ಬರುವವರೆಲ್ಲಾ‌ ಬರಲಿ. ಹಬ್ಬ ಮಾಡೋಣಾ. ಕೆಲಸ ಮಾಡೋಣಾ. ರಾಜ್ಯಕ್ಕೆ ಸೇವೆ ಸಲ್ಲಿಸೋಣಾ. ಎಲ್ಲವೂ ಚೆನ್ನಾಗಿ ಆಗಲಿ ಎಂದು ಹಾರೈಸಿದ್ದಾರೆ.

ಸದ್ಯ ಲೋಕಸಭಾ‌ ಚುನಾವಣೆಯೇ ಕಾಂಗ್ರೆಸ್ ನ ಟಾರ್ಗೆಟ್ ಆಗಿದೆ. ಈಗಾಗಲೇ ಸಾಕಷ್ಟು ತಯಾರಿಯನ್ನು ನಡೆಸಿರುವ ಕಾಂಗ್ರೆಸ್ ಜೊತೆಗೆ ವಿಪಕ್ಷಗಳ ಒಟ್ಟಾಗಿವೆ. ಈ ಬಾರಿ ಕಾಂಗ್ರೆಸ್ ಸೇರಿದಂತೆ ಎಲ್ಲಾ ವಿಪಕ್ಷಗಳಿಗೂ ಬಿಜೆಪಿಯೇ ಟಾರ್ಗೆಟ್ ಆಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...