Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್ ಟಿ ಸೋಮಶೇಖರ್ ಉಳಿಸಿಕೊಳ್ಳಲು ಬಿಜೆಪಿ ಕಸರತ್ತು : ದೂರು ನೀಡಿದ್ದವರನ್ನೇ ಉಚ್ಚಾಟನೆ ಮಾಡಿದ ಬಿಜೆಪಿ..!

---Advertisement---

 

 

ಬೆಂಗಳೂರು: ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆಗಾಗಿ ಭರ್ಜರಿ ಕಸರತ್ತು ನಡೆಸುತ್ತಿದೆ. ಅದರಲ್ಲೂ ಕಾಂಗ್ರೆಸ್ ಬಿಟ್ಟು ಹೋದವರನ್ನ ಮತ್ತೆ ಕಾಂಗ್ರೆಸ್ ಗೆ ಕರೆತರುವ ಕೆಲಸವಾಗುತ್ತಿದೆ. ಇದರ ನಡುವೆ ಬಿಜೆಪಿ ನಾಯಕರು ಹೈ ಅಲರ್ಟ್ ಆಗಿದ್ದಾರೆ. ಕೆಲವರನ್ನು ಬಿಜೆಪಿಯಲ್ಲಿಯೆ ಉಳಿಸಿಕೊಳ್ಳಲು ಮೂಲ ಬಿಜೆಪಿಗರಿಗೆ ಶಿಕ್ಷೆ ನೀಡಲು ಮುಂದಾಗಿದೆ. ಅದರಲ್ಲೂ ಎಸ್ ಟಿ ಸೋಮಶೇಖರ್ ಅವರನ್ನು ಉಳಿಸಿಕೊಳ್ಳುವುದಕ್ಕಾಗಿಯೇ ಕೆಲವರನ್ನು ಉಚ್ಛಾಟನೆ ಮಾಡಿದೆ.

ಎಸ್ ಟಿ ಸೋಮಶೇಖರ್ ಅವರನ್ನು ತಮ್ಮ ಪಕ್ಷದಲ್ಲಿಯೇ ಉಳಿಸಿಕೊಳ್ಳುವುದಕ್ಕಾಗಿ, ಸರಣಿ ಸಭೆ ನಡೆಸುತ್ತಿದ್ದಾರೆ. ಅದರಲ್ಲೂ ಸೋಮಶೇಖರ್ ಅವರು ಅಸಮಾಧನ ಹೊರ ಹಾಕಿದವರನ್ನೇ ಬಿಜೆಪಿ ಉಚ್ಛಾಟನೆ ಮಾಡಿದೆ. ಯಶವಂತಪುರದ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಮಾರೇಗೌಡ, ಮಾಜಿ ಉಪಾಧ್ಯಕ್ಷ ಧನಂಜಯ ಅವರನ್ನು ಉಚ್ಛಾಟನೆ ಮಾಡಿ, ಪಕ್ಷ ಆದೇಶ ಹೊರಡಿಸಿದೆ‌.

ಈ ಇಬ್ಬರು ಯಶವಂತಪುರ ಕ್ಷೇತ್ರದಲ್ಲಿಯೇ ಸೋಮಶೇಖರ್ ವಿರುದ್ಧ ಕೆಲಸ ಮಾಡುತ್ತಿದ್ದರು ಎಂದು ಅಸಮಾಧಾನ ಮಾಡಿಕೊಂಡಿದ್ದರು. ಅಷ್ಟೇ ಅಲ್ಲ ಇತ್ತಿಚೆಗೆ ಸೋಮಶೇಖರ್ ಅವರ ಭಾವಚಿತ್ರವಾಕಿ ಹುಟ್ಟುಹಬ್ಬ ಆಚರಣೆ ಮಾಡಲಾಗಿತ್ತು. ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದ ಆರೋಪವೂ ಕೇಳಿ ಬಂದಿತ್ತು. ಇವರಿಬ್ಬರ ಮೇಲೆ ಎಸ್ ಟಿ ಸೋಮಶೇಖರ್ ಅಸಮಾಧಾನ ಹೊರ ಹಾಕಿದ್ದರು. ಇದೀಗ ಆ ಇಬ್ಬರನ್ನು ಪಕ್ಷದಿಂದ ಹೊರ ಹಾಕಿ, ಸೋಮಶೇಖರ್ ಅವರಿಗೆ ಸಮಾಧಾನ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎನ್ನಲಾಗುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment