Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾವೇರಿ ಒಡಲಲ್ಲಿ ನೀರು ಇಲ್ಲದೆ ಇದ್ದರು, ಇಂದು ತಮಿಳುನಾಡಿಗೆ ಹರಿಸಿದ ನೀರು ಎಷ್ಟು ಗೊತ್ತಾ..?

---Advertisement---

 

ಮಳೆ ಇಲ್ಲದೆ ಇದ್ದರೂ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರು ಮಾತ್ರ ನಿಂತಿಲ್ಲ. ದಿನೇ ದಿನೇ ಕಾವೇರಿಯ ಒಡಲು ಮಾತ್ರ ಬತ್ತುತ್ತಿದೆ. ಸದ್ಯ ಕಾವೇರಿಯಲ್ಲಿರುವುದು ಕೇವಲ 106 ಅಡಿ ಮಾತ್ರ. ಕಾವೇರಿಯ ಒಡಲು ಬರಿದಾಗುತ್ತಿರುವ ಹಿನ್ನೆಲೆ ಮಂಡ್ಯದ ರೈತರು ಹೋರಾಟದ ಮೇಲೆ ಹೋರಾಟ ಮಾಡುತ್ತಿದ್ದಾರೆ. ಆದ್ರೂ ಕ್ಯಾರೆ ಎನ್ನುತ್ತಿಲ್ಲ.

 

ರಾಜ್ಯದಲ್ಲಿ ಮಳೆ ಇಲ್ಲದೆ ಬಿತ್ತನೆ ಬೀಜ ಹಾಕುವುದಕ್ಕೂ ಹಿಂದೇಟು ಹಾಕುತ್ತಿದ್ದಾರೆ. ಹೊಲ ಉಳುಮೆ ಮಾಡಿ, ಮಳೆಗಾಗಿ ಕಾಯುತ್ತಾ ಕೂತಿದ್ದಾರೆ ರೈತರು. ಇದರ ನಡುವೆ ತಮಿಳುನಾಡು ಮಾತ್ರ ನಮಗೆ ಬರಬೇಕಾದ ಕಾವೇರಿ ನೀರನ್ನು ನೀಡಲೇಬೇಕೆಂದು ಹಠ ಮಾಡಿ, ನೀರು ಪಡೆಯುತ್ತಿದೆ. ಕಾವೇರಿಯಲ್ಲಿಯೇ ನೀರು ಇಲ್ಲದೆ ಇದ್ದರು, ಇಂದು 15.375 ಕ್ಯೂಸೆಕ್ ನೀರನ್ನು ಬಿಡಲಾಗಿದೆ.

ತಮಿಳುನಾಡಿಗೆ ನೀರು ಬಿಡುತ್ತಿರುವುದು ಕರ್ನಾಟಕ ರೈತರಿಗೆ ಬೇಸರ ತರಿಸಿದೆ. ಮಳೆ ಉತ್ತಮವಾಗಿದ್ದರೆ, ಕೆಆರ್ಎಸ್ ನಲ್ಲಿ ಬೇಕಾದಷ್ಟು ನೀರು ಇದ್ದರೆ ಬಿಡಲಿ, ಯಾವುದೇ ಬೇಸರ ಇಲ್ಲ. ಆದ್ರೆ ಈಗ ನಮ್ಮಲ್ಲಿಯೇ ಕುಡಿಯುವುದಕ್ಕೆ, ವ್ಯವಸಾಯಕ್ಕೆ ನೀರು ಸಮಸ್ಯೆಯಾಗುವ ಸಾಧ್ಯತೆ ಇದೆ. ಈ ಸಮಯದಲ್ಲೂ ನೀರು ಹರಿಸಿದರೆ ಹೇಗೆ ಅನ್ನೋದು ಹಲವರ ಅಭಿಪ್ರಾಯ.

ಮಂಡ್ಯ ಸಂಸದೆ ಸುಮಲತಾ ಕೂಡ ಈ ವಿಚಾರವಾಗಿ ಮಾತನಾಡಿದ್ದರು. ಈ ಬಗ್ಗರ ಗಮನ ನೀಡುತ್ತೇವೆ. ಕೇಂದ್ರ ಸರ್ಕಾರಕ್ಕೂ ಪತ್ರದ ಮೂಲಕ ಮನವಿ ಮಾಡುತ್ತೇವೆ ಎಂದಿದ್ದರು. ಅದಷ್ಟೇ ಅಲ್ಲ ರಾಜ್ಯ ಸರ್ಕಾರ ಕೂಡ ಬುಧವಾರ ಸರ್ವಪಕ್ಷಗಳ ಸಭೆ ಕರೆದಿದೆ. ಅಂದು ಎಲ್ಲವನ್ನು ಚರ್ಚೆ ನಡೆಸಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...