Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ ಮೂಲದ ದಂಪತಿ ಅಮೆರಿಕಾದಲ್ಲಿ ಸಾವು : ಕಾರಣ ಏನು..? ಡಿಸಿ ಹೇಳಿದ್ದು ಹೀಗೆ..!

Facebook
Twitter
Telegram
WhatsApp

 

ದಾವಣಗೆರೆ ಮೂಲದ ಯೋಗೀಶ್, ಪ್ರತಿಭಾ, ಯಶ್ ಎನ್ನುವವರು ಅಮೆರಿಕಾದ ನ್ಯೂಯಾರ್ಕ್ ಬಳಿ ನಿಧನರಾಗಿದ್ದಾರೆ. ಮೂಲಗಳ ಪ್ರಕಾರ ಅವರ ಪತಿ ಯೋಗೀಶ್, ಮೊದಲು ಹೆಂಡತಿ ಮತ್ತು ಮಗನಿಗೆ ಗುಂಡು ಹಾರಿಸಿ, ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕಳೆದ ಹತ್ತು ವರ್ಷದಿಂದ ಈ ಕುಟುಂಬ ಅಮೆರಿಕಾದಲ್ಲಿ ವಾಸವಾಗಿದೆ. ಈ ಸಂಬಂಧ ದಾವಣಗೆರೆ ಡಿಸಿ ಪ್ರತಿಕ್ರಿಯೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಮಾತನಾಡಿ, ಅಮೆರಿಕಾದ ಕನ್ಸಲ್ ಜನರಲ್ ಮಂಜುನಾಥ್, ಡೆಪ್ಯೂಟ್ ಕನ್ಸಲ್ ಜನರಲ್ ವರುಣ್ ಅವರನ್ನು ಈಗಾಗಲೇ ಆನ್ಲೈನ್ ಮೂಲಕ ಸಂಪರ್ಕ ಮಾಡಿದ್ದೇವೆ. ಅವರ ಬಳಿ ಸಾವಿನ ಬಗ್ಗೆ ವಿವರಣೆ ಕೇಳಲಾಗಿದೆ. ಮೃತದೇಹಗಳನ್ನು ದಾವಣಗೆರೆಗೂ ಶಿಫ್ಟ್ ಮಾಡುವುದಕ್ಕೆ ಚರ್ಚೆ ನಡೀತಾ ಇದೆ. ಈ ಕೇಸ್ ಸಂಬಂಧ ಈಗಾಗಲೇ ತನಿಖೆ ನಡೀತಾ ಇದೆ. ಮೃತರ ಸಂಬಂಧಿಕರು ಕೂಡ ಅಲ್ಲಿ ಇದ್ದಾರೆ. ಎಲ್ಲಾ ಪ್ರಕ್ರಿಯೆ ಮುಗಿಸಿ, ಮೃತದೇಹಗಳನ್ನು ತರಬೇಕಾ ಅಥವಾ ಅಲ್ಲಿಯೇ ವಿಸರ್ಜನೆ ಮಾಡಬೇಕಾ ಎಂಬ ಬಗ್ಗೆ ನಿರ್ಧಾರ ಮಾಡ್ತಾ ಇದ್ದೇವೆ.

ನಮ್ಮ ಜಿಲ್ಲಾಡಳಿತ ಪ್ರತಿ ಎರಡು ಗಂಟೆಗೊಮ್ಮೆ ಅಲ್ಲಿನ ಸಂಪರ್ಕ ಮಾಡ್ತಾ ಇದ್ದೇವೆ‌. ಅಲ್ಲಿನ ನಿಯಮಗಳನ್ನು ಫಾಲೋ ಮಾಡಬೇಕಾಗಿರುವ ಕಾರಣ ಸಮಯಾವಕಾಶ ಬೇಕಾಗಿದೆ. ಕುಟುಂಬಸ್ಥರು ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದಿದ್ದಾರೆ. ಆದ್ರೆ ಅಮೆರಿಕಾದ ಅಧಿಕಾರಿಗಳು ಅಸ್ವಾಭಾವಿಕ ಸಾವು ಅಂತಷ್ಟೇ ತಿಳಿಸಿದ್ದಾರೆ. ತನಿಖೆಯಾದ ಬಳಿಕ ಎಲ್ಲಾ ಸತ್ಯ ಹೊರ ಬರಲಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!