Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾವೇರಿಗಾಗಿ ತಮಿಳುನಾಡು ಕ್ಯಾತೆ : ಬಿಜೆಪಿ ಸಂಸದರಿಂದ ಪ್ರತಿಭಟನೆ..!

Facebook
Twitter
Telegram
WhatsApp

 

ಕರ್ನಾಟಕದಲ್ಲಿ ಮಳೆಯ ಪರಿಸ್ಥಿತಿ ಹೇಗಿದೆ ಅನ್ನೋದು ತಿಳಿದಿದ್ದರು ಸಹ ತಮಿಳುನಾಡು ತನ್ನ ಕ್ಯಾತೆ ನಿಲ್ಲಿಸಿಲ್ಲ. ನಮಗೆ ಬರಬೇಕಾದ ನೀರನ್ನು ಬಿಡಬೇಕು ಎಂದು ತಮಿಳುನಾಡು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಇಂದು ತುರ್ತು ಅರ್ಜಿ ವಿಚಾರಣೆ ಮಾಡುವುದಕ್ಕೆ ತಿಳಿಸಿತ್ತು. ಅದರಂತೆ ಸುಪ್ರೀಂ ಕೋರ್ಟ್ ನಲ್ಲಿ ಹೊಸ ಪೀಠ ರಚನೆ ಮಾಡಿ, ಆ ಮೂಲಕ ಸಮಸ್ಯೆಗಳನ್ನು ಹೊಸ ಪೀಠದ ಮುಂದೆ ಹೇಳಿಕೊಳ್ಳಲು ಸೂಚಿಸಿದೆ.

ಈ ಕಡೆ ತಮಿಳುನಾಡಿನ ನಡೆಗೆ ಕೋಪಗೊಂಡ ಮಂಡ್ಯ, ಮೈಸೂರು ಜನ ಇದೀಗ ಪ್ರತಿಭಟನೆ ನಡೆಸುತ್ತಿದ್ದಾರೆ‌. ಬಿಜೆಪಿ ನಾಯಕರು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ಪ್ರತಿಭಟನೆಯಲ್ಲಿ ಮೈಸೂರು, ಬೆಂಗಳೂರು ಸಂಸದರು ಭಾಗಿಯಾಗಿದ್ದು, ತೇಜಸ್ವಿ ಸೂರ್ಯ, ಪಿಸಿ ಮೋಹನ್, ಸುಮಲತಾ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.

ಈಗಾಗಲೇ ರೈತರೆಲ್ಲ ಪ್ರತಿಭಟನೆ ನಡೆಸಿದ್ದರು. ಇಂದು ಬಿಜೆಪಿ‌ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರದ ನಡೆಯನ್ನು ಕಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀರು ಬಿಡುಗಡೆ ವಿರೋಧಿಸಿ, ಮಂಡ್ಯದ ಸಂಜಯ್ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!