Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಟ ಗಣೇಶ್ ಕಟ್ಟಡ ನಿರ್ಮಾಣಕ್ಕೆ ಅರಣ್ಯ ಇಲಾಖೆ ನೋಟೀಸ್ : ಹೈಕೋರ್ಟ್ ನಲ್ಲಿ ಸಿಕ್ಕ ಉತ್ತರವೇನು..?

Facebook
Twitter
Telegram
WhatsApp

 

ನಟ ಗೋಲ್ಡನ್ ಸ್ಟಾರ್ ಗಣೇಶ್ ಗುಂಡ್ಲುಪೇಟೆ ತಾಲೂಕಿನ ಹಂಗಾಳ ಹೋಬಳಿಯ ಜಕ್ಕಳ್ಳಿ ಗ್ರಾಮದಲ್ಲಿ ಮನೆ ನಿರ್ಮಾಣದ ಕೆಲಸ‌ನಡೆಸುತ್ತಿದ್ದಾರೆ. ಆದರೆ ಇದು ಪರಿಸರ ಸೂಕ್ಷ್ಮ ಪ್ರದೇಶವಾಗಿದೆ ಎಂದು ಅರಣ್ಯ ಇಲಾಖೆ ನೋಟೀಸ್ ನೀಡಿತ್ತು. ಈ ನೋಟೀಸ್ ಸಂಬಂಧ ನಟ ಗಣೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಇದರ ವಿಚಾರಣೆ ನಡೆಸಿದ್ದು, ಒಂದು ವಾರದಲ್ಲಿ ಅರಣ್ಯ ಇಲಾಖೆಯ ನೋಟೋಸ್ ಗೆ ಪ್ರತಿಕ್ರಿಯೆ ನೀಡಿವಂತೆ ಸೂಚಿಸಿದೆ.

ಗಣೇಶ್ ಪರ ವಕೀಲರು ವಾದಿಸಿದ ಪ್ರಕಾರ, ನಟ ಗಣೇಶ್ ಅರಣ್ಯ ಪ್ರದೇಶದಲ್ಲಿ ಯಾವುದೇ ಕಟ್ಟಡ ನಿರ್ಮಾಣ ಮಾಡುತ್ತಿಲ್ಲ. 10 ಕಿಲೋಮೀಟರ್ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ ನಿರ್ಮಿಸಬಾರದೆಂದು ಸುಪ್ರೀಂ ತೀರ್ಪಿನಲ್ಲಿ ಈಗ ಮಾರ್ಪಾಡಾಗಿದೆ. ಸದ್ಯಕ್ಕೆ ಅಲ್ಲಿ ಭೂಮಿಯನ್ನು ಸಮತಟ್ಟು ಮಾಡಿ, ಸ್ಟೀಲ್ ಕಟ್ಟೆವನ್ನಷ್ಟೇ ನಿರ್ಮಾಣ ಮಾಡಲಾಗುತ್ತಿದೆ. ಹೀಗಾಗಿ ಅರಣ್ಯ ಇಲಾಖೆ ನೀಡಿರುವ ನೋಟೀಸ್ ಗೆ ತಡೆಯಾಜ್ಞೆ ತರಬೇಕೆಂದು ವಕೀಲರು ಮನವಿ ಮಾಡಿದ್ದಾರೆ. ಇನ್ನು ಹೈಕೋರ್ಟ್ ಕೂಡ ವಕೀಲರು ಹೇಳಿದ ಹೇಳಿಕೆ, ನೊಇಡಿದ ಸಾಕ್ಷ್ಯಾಧಾರಗಳನ್ನು ಗಮನಹರಿಸಿದ್ದಾರೆ.

ನಾಲ್ಕು ವಾರದಲ್ಲಿ ವಿಚಾರಣಾ ಪ್ರಕ್ರಿಯೆ ಪೂರ್ಣಗೊಳಿಸಲು ಅರಣ್ಯ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಗಣೇಶ್ ಅವರಿಗೆ ಸಂಪೂರ್ಣ ರಿಲೀಫ್ ಸಿಗದಿದ್ದರೂ ಈಗ ಮತ್ತೆ ವಿವಾದ ಅರಣ್ಯ ಇಲಾಖೆಗೆ ವರ್ಗಾವಣೆಯಾಗಿದೆ. ಅರಣ್ಯ ಇಲಾಖೆ ಗಣೇಶ್ ಅಹವಾಲನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕಿದೆ. ಕಾಂಕ್ರಿಟ್ ತಳಪಾಯದ ಕಟ್ಟಡದ ಕಾಮಗಾರಿ ನಡೆಸಲಾಗುತ್ತಿದೆ. ಶಾಶ್ವತ ಕಟ್ಟಡಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲವೆಂದು’ ಮೌಖಿಕವಾಗಿ ಕೋರ್ಟ್​ ಅಭಿಪ್ರಾಯಪಟ್ಟಿದೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!