Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಜಯವಾಣಿ ಸ್ಥಾನಿಕ ಸಂಪಾದಕ ನವೀನ್, ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಸದಾನಂದ ಹೆಗಡೆ ಸೇರಿ 8 ಮಂದಿಗೆ ಮಾಧ್ಯಮ ಪ್ರಶಸ್ತಿ

---Advertisement---

 

ಸುದ್ದಿಒನ್,ದಾವಣಗೆರೆ, ಆ.21 : ವಿಜಯವಾಣಿಯ ಸ್ಥಾನಿಕ ಸಂಪಾದಕ ಎಂ.ಬಿ. ನವೀನ್, ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಸದಾನಂದ ಹೆಗಡೆ ಸೇರಿದಂತೆ ಎಂಟು ಮಂದಿಗೆ  ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ವತಿಯಿಂದ ನೀಡಲಾಗುವ ಮಾಧ್ಯಮ ಪ್ರಶಸ್ತಿಗೆ ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ.

ಪ್ರತಿವರ್ಷದಂತೆ ಈ ಬಾರಿಯೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಸದಸ್ಯರಿಗೆ ಮಾಧ್ಯಮ ಪ್ರಶಸ್ತಿ ನೀಡಲಾಗುವುದು. ಈ ಬಾರಿ ಪ್ರಶಸ್ತಿ ನೀಡಲು ಸಮಿತಿ ರಚಿಸಲಾಗಿತ್ತು. ಅದರಂತೆ ಸಮಿತಿಯು ಸೋಮವಾರ ಸಭೆ ನಡೆಸಿ ಎಂಟು ಜನ ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಗೆ ಆಯ್ಕೆಯಾದ ಪತ್ರಕರ್ತರ ವಿವರ ಈ ಕೆಳಗಿನಂತಿದೆ.

1)ವಿಜಯವಾಣಿಯ ಸ್ಥಾನಿಕ ಸಂಪಾದಕ ಎಂ.ಬಿ. ನವೀನ್,

2) ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಸದಾನಂದ ಹೆಗಡೆ,

3) ಕನ್ನಡ ಭಾರತಿ ಸಂಪಾದಕ ಮಲ್ಲಿಕಾರ್ಜುನ ಕಬ್ಬೂರ್,

4) ವಾರ್ತಾ ವಿಹಾರ ಸುದ್ದಿ ಸಂಪಾದಕ ಎಂ.ವೈ. ಸತೀಶ್,

5) ದಾವಣಗೆರೆ ಕನ್ನಡಿಗ ಸಂಪಾದಕ ಆರ್. ರವಿ,

6) ಜನತಾವಾಣಿ ಹಿರಿಯ ವರದಿಗಾರ ಎನ್.ವಿ. ಶ್ರೀನಿವಾಸ,

7) ನ್ಯೂಸ್ 18 ಕನ್ನಡ ಸುದ್ದಿವಾಹಿನಿ ಕ್ಯಾಮರಾ ಮ್ಯಾನ್/ ಜಿಲ್ಲಾ ವರದಿಗಾರ ಎ.ಪಿ. ಸಂಜಯ್,

8) ರಾಜ್ ನ್ಯೂಸ್ ವರದಿಗಾರ ರಾಮಪ್ರಸಾದ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಆಯ್ಕೆಗೊಂಡವರಿಗೆ ಮಾಧ್ಯಮ ನಗದು ಮತ್ತು ಪ್ರಶಸ್ತಿಯನ್ನು ಗಣ್ಯರಿಂದ ಪ್ರದಾನ ಮಾಡಲಾಗುವುದು. ಮಾಧ್ಯಮ ದಿನಾಚರಣೆ ಮತ್ತು ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್ 27ರಂದು ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಅಧ್ಯಕ್ಷರಾದ ಕೆ. ಏಕಾಂತಪ್ಪ, ಪ್ರಧಾನ ಕಾರ್ಯದರ್ಶಿ ಡಾ. ಸಿ. ವರದರಾಜ್, ಖಜಾಂಚಿ ಮಧು ನಾಗರಾಜ್ ಕುಂದುವಾಡ ತಿಳಿಸಿದ್ದಾರೆ.

 

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...