Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಸೇರ್ಪಡೆ ಚರ್ಚೆ ಬೆನ್ನಲ್ಲೇ ಸೋಮಶೇಖರ್ ಕ್ಷೇತ್ರಕ್ಕೆ ಹರಿದು ಬಂತು ಭರಪೂರ‌ ಅನುದಾನ..!

Facebook
Twitter
Telegram
WhatsApp

 

 

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಎಸ್ ಟಿ ಸೋಮಶೇಖರ್ ಮತ್ತೆ ಕಾಂಗ್ರೆಸ್ ಗೆ ಮರಳಲಿದ್ದಾರೆ ಎಂಬ ಚರ್ಚೆ ಜೋರಾಗಿ ನಡೀತಾ ಇದೆ. ಆ ಚರ್ಚೆಯ ನಡುವೆಯೇ ಸೋಮಶೇಖರ್ ಹಾಗೂ ಸಿಎಂ ಸಿದ್ದರಾಮಯ್ಯ ಭೇಟಿಯ ಫೋಟೋಗಳು ಸಹ ವೈರಲ್ ಆಗಿತ್ತು. ಇದೀಗ ಯಶವಂತಪುರ ಕ್ಷೇತ್ರಕ್ಕೆ ಅನುದಾನದ ಮಳೆಯೇ ಸುರಿದಿದೆ.

ದಾಸರಹಳ್ಳಿ, ಯಲಹಂಕ ಕ್ಷೇತ್ರಗಳಿಗೆ ಕಡಿಮೆ ಅನುದಾನ ನೀಡಲಾಗಿದೆ. ಆದ್ರೆ ಎಸ್ ಟಿ ಸೋಮಶೇಖರ್ ಪ್ರತಿನಿಧಿಸುವ ಕ್ಷೇತ್ರ ಯಶವಂತಪುರಕ್ಕೆ ಬಿಬಿಎಂಪಿ ಕಡೆಯಿಂದ ಭರಪೂರ ಅನುದಾನ ಸಿಕ್ಕಿದೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗ್ತಾರೆ ಎಂಬ ಚರ್ಚೆಯ ಬೆನ್ನಲ್ಲೇ ಹೀಗೆ ಭರಪೂರ ಅನುದಾನ ಹರಿದು ಬಂದಿರುವುದು, ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

 

ಬಿಜೆಪಿ ಶಾಸಕ S​.T.ಸೋಮಶೇಖರ್ ಪ್ರತಿನಿಧಿಸುವ ಯಶವಂತಪುರ ಕ್ಷೇತ್ರಕ್ಕೆ ಬಿಬಿಎಂಪಿಯಿಂದ ಒಟ್ಟು 7 ಕೋಟಿ 63 ಲಕ್ಷ ರೂ. ಅನುದಾನ ಮಂಜೂರು ಮಾಡಿದೆ. ಹೇರೋಹಳ್ಳಿ ಹಾಗೂ ಕೆಂಗೇರಿ ಭಾಗಕ್ಕೆ ಸೇರಿದಂತೆ ಕುಡಿಯುವ ನೀರಿನ ಯೋಜನೆಗಾಗಿ 7.63 ಕೋಟಿ ಅನುದಾನ ನೀಡಲಾಗಿದೆ. ನೀರು ಪೂರೈಸುವ ಟ್ಯಾಂಕರ್‌ಗಳಿಗೆ 1 ಕೋಟಿ 63 ಲಕ್ಷ ರೂ. ಮೀಸಲಿಡಲಾಗಿದೆ. ಹೊಸದಾಗಿ ಬೋರ್​ವೆಲ್ ಕೊರೆಸಲು 4 ಕೋಟಿ ರೂಪಾಯಿ ಮೀಸಲು ಹಾಗೂ ನಿರ್ವಹಣೆ ಮಾಡಲು 2 ಕೋಟಿ ರೂಪಾಯಿ ಅನುದಾನ ಮೀಸಲು ಇಡಲಾಗಿದೆ. ಇತ್ತಿಚೆಗಷ್ಟೇ ಎಸ್ ಟಿ ಸೋಮಶೇಖರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ತಮ್ಮ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದ್ದರು. ಅನುದಾನ ನೀಡುವಂತೆಯೂ ಕೇಳಿದ್ದರು. ಇದರ ಬೆನ್ನಲ್ಲೇ ಅನುದಾನ ಬಿಡುಗಡೆಯಾಗಿದ್ದು, ಇದೇನು ಕಾಂಗ್ರೆಸ್ ಗೆ ಸೆಳೆಯುವ ತಂತ್ರವಾ ಎಂಬ ಚರ್ಚೆ ಹುಟ್ಟುಹಾಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!