Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಹುಕೋಟಿ ವೆಚ್ಚದಲ್ಲಿ ‘ಓ ಮೈ ಲವ್’ ಸಿದ್ದ – ‘ಏನಾಯ್ತೋ ಕಾಣೆ’ ಹಾಡು ಕಂಪ್ಲೀಟ್

Facebook
Twitter
Telegram
WhatsApp

ಇನ್ನು ಸ್ವಲ್ಪೇ ದಿನ ನಿಮ್ಮೆಲ್ಲರ ಮನಸ್ಸಲ್ಲಿ ಓ ಮೈ ಲವ್ ಸಿನಿಮಾದ ಆ ಹಾಡು ಗುಯ್ ಗುಡೋದ್ರಲ್ಲಿ ಡೌಟೇ ಇರಲ್ಲ. ನಾವ್ ಯಾಕ್ ಇಷ್ಟು ಕಾನ್ಫಿಡೆಂಟ್ ಆಗಿ ಹೇಳ್ತಿದ್ದೀವಿ ಅಂದ್ರೆ ಆ ಹಾಡಿನ ಸ್ಟ್ರೆಂತ್ ಅಷ್ಟಿದೆ. ಓ ಮೈ ಲವ್ ಸಿನಿಮಾ ಬಹುಕೋಟಿ ವೆಚ್ಚದಲ್ಲಿ ತಯಾರಾಗ್ತಿರೋ ಸಿನಿಮಾ. ಅಕ್ಷಿತ್ ಶಶಿಕುಮಾರ್ ನಾಯಕ ನಟನಾಗಿ ನಟಿಸುತ್ತಿರುವ ಈ ಚಿತ್ರ ಹಾಡಿನ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ.

ನಾಗೇಂದ್ರ ಪ್ರಸಾದ್ ಸಾಹಿತ್ಯದ ‘ಏನಾಯ್ತೋ ಕಾಣೆ ಏನಾಯ್ತೋ ಕಾಣೆ ತಂಗಾಳಿ ಸುರಿದಂತೆ ತಂಪಾದೆ’ ಅನ್ನೋ ಸಾಲುಗಳೇ ಕಿವಿಗೆ ಇಂಪೆನಿಸಿದೆ. ವಿ ಮುರುಳಿ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ. ಅಕ್ಷಿತ್ ಶಶಿಕುಮಾರ್ ಹಾಗೂ ಕೀರ್ತಿ ಕಲ್ಕೆರೆ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ಇದೊಂದು ಪಕ್ಕಾ ಲವ್ ಸ್ಟೋರಿ ಸಿನಿಮಾ ಆದ್ರೆ ಇದ್ರಲ್ಲೂ ಕಾಮಿಡಿ ಇದೆ.. ಸೆಂಟಿಮೆಂಟ್ ಇದೆ.. ಭರ್ಜರಿ ಆ್ಯಕ್ಷನ್ ಕೂಡ ಇದೆ. ಹೀಗಾಗಿ ಓ ಮೈ ಲವ್ ಎಲ್ಲಾ ವರ್ಗದವರನ್ನು ಸೆಳೆಯೋದಕ್ಕೆ ರೆಡಿಯಾಗಿದೆ. ಈಗಾಗ್ಲೇ ಬಳ್ಳಾರಿ ದರ್ಬಾರ್ ಸಿನಿಮಾ ನಿರ್ದೇಶಿಸಿ ಸೈ ಎನಿಸಿಕೊಂಡಿರೋ ಸ್ಮೈಲ್ ಶ್ರೀನು ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಅಷ್ಟೇ ಅಲ್ಲ ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಜಿಸಿಬಿ ಲಾಂಛನದಲ್ಲಿ ಜಿ ರಾಮಾಂಜಿ‌ನಿ ಬಂಡವಾಳ ಹೂಡಿದ್ದಾರೆ. ಅದರ ಜೊತೆಗೆ ಕಥೆ ಬರೆಯೋ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಈಗಾಗ್ಲೇ ಸಿನಿಮಾ 90 ಪರ್ಸೆಂಟ್ ಚಿತ್ರೀಕರಣ ಮುಗಿಸಿದೆ ಓ ಮೈ ಲವ್ ಸಿನಿಮಾ. ಇನ್ನುಳಿದಿರೋದು ಮೂರು ಹಾಡುಗಳ ಚಿತ್ರೀಕರಣವಷ್ಟೇ. ಏನಾಯ್ತೋ ಕಾಣೆ ಹಾಡು ಅದ್ಭುತವಾಗಿ ಮೂಡಿ ಬಂದಿದೆ. ಕೇಳುಗರಿಗೆ, ಸಂಗೀತ ಪ್ರಿಯರನ್ನ ಸೆಳೆಯೋದ್ರಲ್ಲಿ ಡೌಟೆ ಇಲ್ಲ ಅಂತಿದ್ದಾರೆ ಚಿತ್ರದ ನಿರ್ದೇಶಕ ಸ್ಮೈಲ್ ಶ್ರೀನು. ಚಿತ್ರದಲ್ಲಿ ಕಲಾ ಸಾಮ್ರಾಟ್ ಎಸ್ ನಾರಾಯಣ್ ತೆಲುಗು ಖಳನಟ ದೇವ್‍ಗಿಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ದೀಪಿಕಾ ಆರಾಧ್ಯ, ಪೃಥ್ವಿರಾಜ್, ಸಾಧುಕೋಕಿಲ, ಪವಿತ್ರಾ ಲೋಕೇಶ್, ಸಂಗೀತಾ, ಆನಂದ್, ಭಾಗ್ಯಶ್ರೀ, ಶಿಲ್ಪಾ, ರವಿ ರಾಮ್‍ಕುಮಾರ್ ಹಾಗೂ ಇತರರು ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ.
ಚಿತ್ರಕ್ಕೆ ಚರಣ್ ಅರ್ಜುನ್ ಸಂಗೀತ, ಹಾಲೇಶ್ ಎಸ್. ಅವರ ಛಾಯಾಗ್ರಹಣ, ರಿಯಲ್ ಸತೀಶ್ ಅವರ ಸಾಹಸ, ಡಾ.ವಿ.ನಾಗೇಂದ್ರಪ್ರಸಾದ್ ಅವರ ಸಾಹಿತ್ಯ, ವಿ.ಮುರಳಿ ಅವರ ನೃತ್ಯ ನಿರ್ದೇಶನ, ಡಿ.ಮಲ್ಲಿ ಸಂಕಲನ, ಜನಾರ್ದನ್ ಅವರ ಕಲಾ ನಿರ್ದೇಶನವಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಚಲಪತಿ ನಿಧನ

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 :ನಗರದ ತುರುವನೂರು ರಸ್ತೆ ನಿವಾಸಿ, ಶಿಕ್ಷಣ ಇಲಾಖೆ ನಿವೃತ್ತ ನೌಕರ ಚಲಪತಿ (66) ಅನಾರೋಗ್ಯದಿಂದ ಶನಿವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ವಿಜಯಕರ್ನಾಟಕ ಚಿತ್ರದುರ್ಗ ಜಿಲ್ಲಾ ಪ್ರಸರಾಂಗ

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.   ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ

ಈ ಬಾರಿಯ ಬಿಗ್ ಬಾಸ್ ಗೆ ಹೋಗ್ತಿದ್ದಾರೆ ಈ ಸ್ಟಾರ್ ಗಳು : ಕನ್ಫರ್ಮ್ ಸುದ್ದಿ ಇದು..!

ಬೆಂಗಳೂರು : ಬಿಗ್ ಬಾಸ್ ಕನ್ನಡ‌ ಸೀಸನ್ 11ಗೆ ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಮನೆಯೊಳಗೆ ಹೋಗೋದು ಯಾರು ಎಂಬ ಕುತೂಹಲ ಇಡೀ ಕರ್ನಾಟಕದ ಜನತೆಗೆ ಇದೆ. ಇಂದು ಸಂಜೆ ಅದಕ್ಕೆ ಕೊಂಚ ತೆರೆ

error: Content is protected !!