Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅಡಿಕೆ ಬೆಳೆಗಾರರಿಗೆ ಉಪಯುಕ್ತ ಮಾಹಿತಿ : ಎಲೆ ಚುಕ್ಕೆ ರೋಗದ ನಿರ್ವಹಣೆಗೆ ಸಲಹೆಗಳು

---Advertisement---

ಸುದ್ದಿಒನ್, ಚಿತ್ರದುರ್ಗ,ಆ.24:  ಚಿತ್ರದುರ್ಗ ತಾಲ್ಲೂಕಿನಲ್ಲಿ ಅಡಿಕೆ ಬೆಳೆಯು ಹೆಚ್ಚಾಗಿದ್ದು ಈ ಬೆಳೆಗೆ ಎಲೆ ಚುಕ್ಕೆ ರೋಗವು ಅತಿಯಾಗಿ ಕಂಡುಬರುತ್ತಿದೆ, ಹೀಗಾಗಿ ಎಲೆ ಚುಕ್ಕೆ ರೋಗ ನಿರ್ವಹಣೆಗಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತೋಟಗಾರಿಕೆ ಇಲಾಖೆಯು ರೈತರಿಗೆ ಸಲಹೆಗಳನ್ನು ನೀಡಿದೆ.

 

ಎಲೆ ಚುಕ್ಕೆ ರೋಗ ತೀವ್ರವಾಗಿ, ಸೋಂಕಿತವಾಗಿರುವ ಕೆಳಗಿನ ಎಲೆಗಳನ್ನು ಸಾಧ್ಯವಿರುವಲ್ಲೆಲ್ಲಾ ತೆಗೆಯಬೇಕು ಮತ್ತು ಅವುಗಳನ್ನು ಸುಡಬೇಕು.
ಮಳೆಗಾಲದಲ್ಲಿ ಆಗಸ್ಟ್ ರಿಂದ ಸೆಪ್ಟಂಬರ್ ವರಗೆ ಕೊಳೆ ರೋಗಕ್ಕೆ ಅಡಿಕೆ ಗೊಂಚಲುಗಳಿಗೆ ಸಿಂಪಡಿಸಿದ ಬೋರ್ಡ್ ದ್ರಾವಣವನ್ನು 1% ಎಲೆ ಚುಕ್ಕೆ ರೋಗವಿರುವ ಗರಿಗಳಿಗೂ ಸಿಂಪಡಿಸಬೇಕು. ಸೆಪ್ಟೆಂಬರ್-ಅಕ್ಟೋಬರ್ ತಿಂಗಳಿನಲ್ಲಿ ರೋಗ ಕಂಡುಬಂದರೆ ಮೊದಲು ಸುತ್ತಿನ ಪ್ರೊಪಿಕೊನಜೋಲ್ 25% ಇ.ಸಿ 01 ಮಿ.ಲೀ ಪ್ರತಿ ಲೀಟರ್ ನೀರಿಗೆ ಅಥವಾ ಟೆಬುಕೊನಜೋಲ್ 01 ಮಿ.ಲೀ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪರಣೆ ಮಾಡಬೇಕು, ರೋಗದ ತೀವ್ರತೆಗೆ ಅನುಗುಣವಾಗಿ 25 ರಿಂದ 30 ದಿನಗಳ ನಂತರ ಎರಡನೆ ಬಾರಿಗೆ ಪ್ರೋಪಿನೆಬ್ 70% ಡಬ್ಲ್ಯೂಪಿಯನ್ನು ಪ್ರತಿ ಲೀಟರ್ ನೀರಿಗೆ 2 ಗ್ರಾಂ ನಷ್ಟು ಬೆರೆಸಿ ಸಿಂಪಡಿಸಬೇಕು.

ಶಿಲೀಂಧ್ರನಾಶಕ ದ್ರಾವಣವನ್ನು ತಯಾರಿಸಿದ ನಂತರ ಅಂಟು ದ್ರಾವಣವನ್ನು ಪ್ರತಿ ಲೀಟರ್ ನೀರಿಗೆ 01 ಮಿ.ಲೀ. ಸೇರಿಸಿ ಸಿಂಪಡಿಸಬೇಕು. ಪೋಷಕಾಂಶಗಳ ನಿರ್ವಹಣೆಗಾಗಿ, ಮಣ್ಣಿನ ಪರೀಕ್ಷೆಯ ದತ್ತಾಂಶದ ಆಧಾರದ ಮೇಲೆ ಶಿಫಾರಸು ಮಾಡಲಾದ ರಸಗೊಬ್ಬರಗಳು 100 ಗ್ರಾಂ ಸಾರಜನಕ, 40 ಗ್ರಾಂ ರಂಜಕ, 140 ಗ್ರಾಂ ಪೊಟ್ಯಾಶ್ ಗೊಬ್ಬರವನ್ನು ಒಂದು ವರ್ಷಕ್ಕೆ ಪ್ರತಿ ಗಿಡಕ್ಕೆ ಬಳಸಬಹುದು. ಸುಣ್ಣದ ಅನ್ವಯದೊಂದಿಗೆ ಮಣ್ಣಿನ ಪಿಹೆಚ್ ಅನ್ನು ತಟಸ್ಥವಾಗಿ ಹೊಂದಿಸಬಹುದು ಎಂದು ಚಿತ್ರದುರ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...