Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಹಿಂದೂ ಮಹಾ ಗಣಪತಿ ಮಹೋತ್ಸವ : ಅದ್ದೂರಿ ಆಚರಣೆಗೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಸಿದ್ದತೆ : ಜಿ.ಎಂ.ಸುರೇಶ್ ಮಾಹಿತಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಆ.24 : ಪ್ರತಿ ವರ್ಷದಂತೆ ಈ ಬಾರಿಯೂ ನಗರದಲ್ಲಿ ಹಿಂದೂ ಮಹಾ ಗಣಪತಿ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲಾಗುವುದೆಂದು ಹಿಂದೂ ಮಹಾಗಣಪತಿ ಉತ್ಸವ ಸಮಿತಿ ನೂತನ ಅಧ್ಯಕ್ಷ ಜಿ.ಎಂ.ಸುರೇಶ್ ತಿಳಿಸಿದರು.

ವಿಶ್ವ ಹಿಂದೂ ಪರಿಷತ್, ಭಜರಂಗದಳದ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸೆ. 3 ರಂದು ಧ್ವಜಪೂಜೆ, 18 ರಂದು ಗಣಪತಿ ಪ್ರತಿಷ್ಠಾಪನೆಯಾಗಲಿದ್ದು, ಅ.8 ರಂದು ಶೋಭಾಯಾತ್ರೆ ನಂತರ ವಿಸರ್ಜನೆಯಾಗುತ್ತದೆ.

ಸಣ್ಣ ಉಪ ಸಮಿತಿಗಳನ್ನು ರಚಿಸಿ ಪ್ರತಿಯೊಬ್ಬರಿಗೂ ಒಂದೊಂದು ಜವಾಬ್ದಾರಿ ನೀಡಲಾಗುವುದು ಎಂದು ಹೇಳಿದರು.
ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಪ್ರಭಂಜನ್ ಮಾತನಾಡಿ ಸಾವರ್ಕರ್ ಹಾಗೂ ಅಶೋಕ್ ಸಿಂಘಾಲ್ ಮಂಟಪದ ಜ.ರಾ.ರಾಮಮೂರ್ತಿ ವೇದಿಕೆಯಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಯಾಗಲಿದೆ. ಹಿಂದೂ ಮಹಾಗಣಪತಿ ಉತ್ಸವ ಸಮಿತಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ್ದು, 35 ರಿಂದ 40 ಮಂದಿ ಪದಾಧಿಕಾರಿಗಳಿರುತ್ತಾರೆ.

ಹಳಬರ ಜೊತೆ ಹೊಸಬರು ಸೇರಿ ಈ ಬಾರಿ ಶೋಭಾಯಮಾನವಾಗಿ ಶೋಭಾಯಾತ್ರೆಯನ್ನು ನೆರವೇರಿಸಲಾಗುವುದು. ವಿಶೇಷ ಕಲಾ ತಂಡಗಳು ಭಾಗವಹಿಸಲಿವೆ ಎಂದರು.
ರುದ್ರೇಶ್, ಶರಣ್, ಸಂದೀಪ್, ಶ್ರೀನಿವಾಸ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!