Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಕೊಟ್ಟ ಸೂಚನೆಗಳೇನು..?

Facebook
Twitter
Telegram
WhatsApp

 

 

ನವದೆಹಲಿ: ತಮಿಳುನಾಡು ಕಾವೇರಿಗಾಗಿ ಪದೇ ಪದೇ ಕ್ಯಾತೆ ತೆಗಯುತ್ತಲೆ ಇದೆ. ಕರ್ನಾಟಕದಲ್ಲಿ ಮಳೆ ಇಲ್ಲದೆ ಹೋದರೂ ನಮಗೆ ಬರಬೇಕಾದ ನೀರನ್ನು ಬಿಡಬೇಕು ಎಂದು ಕೇಳಿದೆ. ಹೀಗಾಗಿ ಈ ಸಂಬಂಧ ಇಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿದೆ.

ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ನ ತ್ರಿ ಸದಸ್ಯ ಪೀಠವೂ ಕೆಲವು ಸೂಚನೆಗಳನ್ನು ನೀಡಿ, ಸೆಪ್ಟೆಂಬರ್ 1ಕ್ಕೆ‌ಅರ್ಜಿ ವಿಚಾರಣೆ ಮೂಂದೂಡಿಕೆ ಮಾಡಿದೆ. ಇಂದು ತಮಿಳುನಾಡು ಸರ್ಕಾರ ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಬಿ. ಆರ್. ಗವಾಯಿ, ನ್ಯಾಯಮೂರ್ತಿ ಪಿ. ಎಸ್. ನರಸಿಂಹ ಮತ್ತು ನ್ಯಾಯಮೂರ್ತಿ ಬಿ. ಕೆ. ಮಿಶ್ರಾ ಒಳಗೊಂಡ ತ್ರಿ ಸದಸ್ಯಪೀಠದಲ್ಲಿ ನಡೆದಿದೆ.

ಸುಪ್ರೀಂ ಕೋರ್ಟ್, ಮಧ್ಯಂತರ ಅವಧಿಯೊಳಗೆ ಕಾವೇರಿ ನದಿ ಪಾತ್ರದ ರಾಜ್ಯಗಳ ಸಭೆ ನಡೆಸುವಂತೆ, ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ಸೂಚನೆ ನೀಡಲಾಗಿದೆ. ಈ ಸಂಬಂಧ ಸೆಪ್ಟೆಂಬರ್ 28 ರಂದು ಈ ಸಂಬಂಧ ಸಭೆ ನಡೆಯಲಿದೆ. ಸಭೆ ಬಳಿಕ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಅರ್ಜಿ ವಿಚಾರಣೆ‌ ನಡೆಸಲಾಗುತ್ತದೆ.

ಕರ್ನಾಟಕದಲ್ಲಿ ಮಳೆಯ ಪ್ರಮಾಣವೇ ಕುಸಿದಿದೆ. ಹೀಗಿರುವಾಗ ಇರುವ ಜಲಾಶಯಗಳೆಲ್ಲಾ ಭತ್ತಿ ಹೋಗುತ್ತಿದೆ. ಆದ್ರೆ ಕಾವೇರಿ ನದಿ ನೀರಿಗಾಗಿ ತಮಿಳುನಾಡು ಅರ್ಜಿ ಸಲ್ಲಿಕೆ ಮಾಡಿದೆ. ಮಳೆ ಇಲ್ಲದ ಕಾರಣ ನೀರು ಬಿಡುವುದಕ್ಕೆ ಕರ್ನಾಟಕ, ಆಗಲ್ಲ‌ ಎಂದು ಅರ್ಜಿ ಸಲ್ಲಿಕೆ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವಾಲ್ಮೀಕಿ ನಿಗಮದ ನೌಕರನ ಆತ್ಮಹತ್ಯೆಗೆ ಟ್ವಿಸ್ಟ್ : 85 ಕೋಟಿ ಅವ್ಯವಹಾರದ ವಾಸನೆ..?

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕೌಂಟ್ ಸೂಪರಿಂಟೆಂಡೆಂಟ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಅವ್ಯವಹಾರದ ವಾಸನೆ ಬಡಿಯುತ್ತಿದೆ. 50 ವರ್ಷ ಚಂದ್ರಶೇಖರ್ , ಮೂಲತಃ ಶಿವಮೊಗ್ಗದವರು. ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ

ಪ್ರಜ್ವಲ್ ರೇವಣ್ಣ ಇಷ್ಟು ದಿನ ಡಿಪ್ರೆಶನ್ ಹೋಗಿಬಿಟ್ಟಿದ್ರಂತೆ..!

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ಚಲ್ ರೇವಣ್ಣ ಇಂದು ವಿಡಿಯೋ ಮೂಲಕ ಪತ್ತೆಯಾಗಿದ್ದಾರೆ. ಎಸ್ಐಟಿ ಎಷ್ಟೇ ನೋಟೀಸ್ ಕೊಟ್ಟರು ಅದಕ್ಕೂ ಅವರ ವಕೀಲರೇ ಉತ್ತರಿಸಿದ್ದರು. ಇಂದು ವಿದೇಶದಲ್ಲಿದ್ದುಕೊಂಡೇ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ

ವಕೀಲರು ಮತ್ತು ನ್ಯಾಯಾಧೀಶರು ಒಂದೇ ನಾಣ್ಯದ ಎರಡು ಮುಖಗಳು : ಶಮೀರ್ ಪೀರ್ ಸಾಬ್ ಅಭಿಮತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಳ್ಳಕೆರೆ, ಮೇ. 27 : ವಕೀಲರು ಮತ್ತು ನ್ಯಾಯಾಧೀಶರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ವಕೀಲರು

error: Content is protected !!