ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದೆ. ಇವತ್ತು ಬರುತ್ತೆ, ನಾಳೆ ಬರುತ್ತೆ ಅಂತ ಮಳೆಗಾಗಿ ಕಾದಿದ್ದೇ ಆಯ್ತು. ಆದ್ರೆ ಮಳೆ ಮಾತ್ರ ಬರಲೇ ಇಲ್ಲ. ಆಗಸ್ಟ್ 24 ರಿಂದ ರಾಜ್ಯದ ಹಲವೆಡೆ ಮಳೆಯಾಗುತ್ತೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿತ್ತು. ಆದರೆ ಹೇಳಿದ ಸಮಯಕ್ಕೆ ಮಳೆ ಕೂಡ ಬರಲಿಲ್ಲ. ಮೋಡದತ್ತ ರೈತರು ಕಣ್ಣು ಬಿಟ್ಟು ಕೂತಿದ್ದಾರೆ.
ರಾಜ್ಯದಲ್ಲಿ ಜೂನ್ ನ ಆರಂಭದಲ್ಲೇ ವರುಣಾನ ಆಗಮನ ತಡವಾಗಿದ್ದು, ಆಗಸ್ಟ್ ಮೊದಲ ವಾರದಲ್ಲೇ ರಾಜ್ಯದಲ್ಲಿ ಮಳೆಯ ಕೊರತೆ ಎದುರಾಗಿದ್ದು,ಜಲಾಶಯಗಳಲ್ಲಿಯೂ ನೀರಿನ ಮಟ್ಟ ಕಡಿಮೆಯಾಗಿದೆ. ಇನ್ನೂ ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ನೈಋತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು.

ಮುಂಗಾರು ಮಳೆ ಈಗ ಕೈಕೊಟ್ಟಿದೆ. ಬೀಜ ಬಿತ್ತನೆ ಮಾಡಬೇಕೆಂದು ಕಾಯುತ್ತಿದ್ದ ರೈತರು ಬೇಸತ್ತು ಮನೆಗೆ ಬಂದಿದ್ದಾರೆ. ಈ ವಾರವಾದರೂ ಮಳೆ ಬಂದ್ರೆ ಹಾಗೋ ಹೀಗೋ ಬೀಜ ಬಿತ್ತನೆ ಮಾಡಬಹುದು ಎಂಬ ಆಸೆಯಿಂದ ಕಾಯುತ್ತಿದ್ದಾರೆ. ಮುಂದಿನ ವಾರ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














