Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್ ಎಂ ಕೃಷ್ಣ ಅವರು ಕೂಡ ಇದೆ ರೀತಿ ಮಾಡಿದ್ದರು.. ಆದ್ರೆ ಅವರ ಸ್ಥಿತಿ ಏನಾಯ್ತು : ಕುಮಾರಸ್ವಾಮಿ ಪ್ರಶ್ನೆ

Facebook
Twitter
Telegram
WhatsApp

ಹಾಸನ: ರಾಜ್ಯದಲ್ಲಿ ಆಪರೇಷನ್ ಹಸ್ತದ ಸದ್ದು ಜೋರಾಗಿದೆ. ಲೋಕಸಭಾ ಚುನಾವಣೆಯನ್ನು ಟಾರ್ಗೆಟ್ ಇಟ್ಟುಕೊಂಡಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಲವರನ್ನು ಕರೆ ತರುವ ಪ್ಲ್ಯಾನ್ ನಲ್ಲಿದೆ. ಈ ಆಪರೇಷನ್ ಹಸ್ತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್ ಡಿ ಕುಮಾರಸ್ವಾಮಿ, ಈ ಹಿಂದೆ ಎಸ್ ಎಂ ಕೃಷ್ಣ ಅವರ ಕಾಲದಲ್ಲೂ ಹೀಗೆ ಆಗಿತ್ತು. ಆದ್ರೆ ಈಗ ಅವರ ಪರಿಸ್ಥಿತಿ ಎಲ್ಲಿಗೆ ಬಂತು ನೋಡಿದ್ದೀರ ಅಲ್ವಾ ಎಂದಿದ್ದಾರೆ.

1990ರಿಂದಲೂ ಎಸ್ ಎಂ ಕೃಷ್ಣ ಅವರು ನಮ್ಮಿಂದ ಐದು ಜನ, ಬಿಜೆಪಿಯಿಂದ ಎಂಟತ್ತು ಜನರನ್ನು ಕರೆದುಕೊಂಡು ಹೋಗಿದ್ದರು. ನಂತರ ಅವರ ಸ್ಥಿತಿ ಎಲ್ಲಿಗೆ ಬಂತು. ನಂತರ ಬಿಜೆಪಿಯವರು ಆಪರೇಷನ್ ಕಮಲ ಮಾಡಿ 40 ಸೀಟ್ ಗೆ ತೃಪ್ತಿ ಪಡಬೇಕಾಯ್ತು. 2013-14ರಲ್ಲಿ ಸಿದ್ದರಾಮಯ್ಯ ಆಪರೇಷನ್ ಆಟವಾಡಿ 2018ರಲ್ಲಿ 78 ಕ್ಕೆ ಬಂದು ನಿಂತಿದ್ದರು. ಇತ್ತಿಚೀಗೆ ನಿಷ್ಠೆ ಎನ್ನುವುದು ಯಾವುದೇ ಪಕ್ಷಕ್ಕೂ ಉಳಿದಿಲ್ಲ. ಕೇವಲ ತಕ್ಷಣ ಸಿಗುವ ಅಧಿಕಾರಕ್ಕೆ ಮರುಳಾಗುತ್ತಾರೆ.

ಇನ್ಮು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿ, ಗ್ಯಾರಂಟಿ ಯೋಜನೆಯಿಂದ ಅದೆಷ್ಟು ಜನರಿಗೆ ಉಪಯೋಗವಾಗಿದೆ ಎಂದು ತಿಳಿಯುತ್ತಿಲ್ಲ. ಸಿಎಂ ಅದಾನಿ, ಅಂಬಾನಿಯವರ ಹಣವನ್ನು ಜನರಿಗೆ ಹಂಚುತ್ತೇನೆ ಎಂದಿದ್ದಾರೆ, ಆದರೆ ಗೃಹ ಜ್ಯೋತಿ ಹೆಸರಿನಲ್ಲಿ ಈಗಲೇ ಅನೇಕರಿಗೆ ಪಟ್ಟು ಬಿದ್ದಿದೆ. ಆಗಸ್ಟ್ ನಲ್ಲೇ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ಯಾವುದೇ ಸಿದ್ಧತೆಗಳಿಲ್ಲದೆ ಅಘೊಷಿತವಾಗಿ ಲೋಡ್ ಶೆಡ್ಡಿಂಗ್ ಮಾಡುತ್ತಿದ್ದರೆ. 120 ತಾಲೂಕಿನಲ್ಲಿ ಬರ ಪರಿಸ್ಥಿತಿ ಇದೆ ಎಂದ ಸರ್ಕಾರ ಗ್ಯಾರಂಟಿ ಯೋಜನೆಯ ವಿಜೃಂಭಣೆ ಬಿಟ್ಟು ರೈತರ ಬಗ್ಗೆ ಯೋಚನೆ ಮಾಡಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!