Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟ್ವಿಟ್ಟರ್ ನಲ್ಲಿ ಚಳ್ಳಕೆರೆ ವೃದ್ದೆಯ ಸಮಸ್ಯೆ : 24 ಗಂಟೆಯಲ್ಲಿ ಬಗೆಹರಿಸಿದ ಸಿಎಂ ಸಿದ್ದರಾಮಯ್ಯ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಆ.27) : ಜಗತ್ತು ಬದಲಾಗಿ ಸುಮಾರು ವರ್ಷಗಳೇ ಕಳೆದಿವೆ. ಮೂಲ ಸೌಕರ್ಯಗಳನ್ನು ಎಲ್ಲರೂ ಪಡೆಯುತ್ತಿದ್ದಾರೆ. ಆದ್ರೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದ ಆ ವೃದ್ದೆ ಮನೆಯಲ್ಲಿ ವಿದ್ಯುತ್ ಅನ್ನೋದು ಮರಿಚಿಕೆಯಾಗಿತ್ತು. ಅದನ್ನು ಮನಗಂಡ ಸ್ತಳೀಯ ನಿವಾಸಿ ಮಹೇಂದ್ರ ಎನ್ನುವವರು ಅಜ್ಜಿಯ ಫೋಟೋ ತೆಗೆದು, ಟ್ವೀಟ್ ಮಾಡಿದ್ದರು.

“ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದ  ದೊಣಮ್ಮ ಎಂಬುವ ಅನಾಥೆ, ನಾಗರಿಕತೆ ಬೆಳೆದು ಶತಮಾನಗಳು ಕಳೆದರೂ , ಕರೆಂಟ್ ವೈರ್ ಹಾಕಿಸಿಕೊಳ್ಳಲು ಹಣವಿಲ್ಲದೆ ಇಂದಿಗೂ ದೀಪದ  ಬೆಳಕಿನಲ್ಲಿ ಬದುಕುತ್ತಿರುವುದು ಈ ದೇಶದ ದುರಂತವೇ ಸರಿ” ಎಂದು ಸಿಎಂ ಹಾಗೂ ಡಿ ಸುಧಾಕರ್, ಶಾಸಕ ಟಿ ರಘುಮೂರ್ತಿ ಸೇರಿದಂತೆ ಹಲವರಿಗೆ ಟ್ಯಾಗ್ ಮಾಡಲಾಗಿತ್ತು. ಅವರ ಟ್ವೀಟ್ ಗೆ ಸರ್ಕಾರ ಸ್ಪಂದಿಸಿದೆ. 24 ಗಂಟೆಯಲ್ಲೇ ಆ ವೃದ್ದೆ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಕೂಡ ಟ್ವೀಟ್ ಮಾಡಿದ್ದಾರೆ.

ಬದಲಾವಣೆ ತರಲು ನಾವೂ ಸಿದ್ಧ, ನೀವೂ ಜೊತೆಗಿರಿ ಎಂದಿದ್ದಾರೆ. “ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದ ದೊಣಮ್ಮ ಎಂಬ ವೃದ್ಧ ಮಹಿಳೆ ಬಡತನದ ಕಾರಣಕ್ಕೆ ವಿದ್ಯುತ್ ಸಂಪರ್ಕ ಪಡೆಯದೆ ದೀಪದ ಆಸರೆಯಲ್ಲಿ ಬದುಕು ಸಾಗಿಸುತ್ತಿದ್ದ ವಿಚಾರವನ್ನು ಸ್ಥಳೀಯರಾದ ಮಹೇಂದ್ರ ಅವರು ನಮ್ಮ ಕಚೇರಿಯ ಗಮನಕ್ಕೆ ತಂದರು. ತಕ್ಷಣ ಅವರ ಮನವಿಗೆ ಸ್ಪಂದಿಸಿ, ಕೇವಲ 24 ಗಂಟೆಗಳ ಒಳಗೆ ಆ ತಾಯಿಯ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದೇವೆ. ಬದಲಾವಣೆ ಮೂಡಿಸಲು ನಾವು ಸಿದ್ಧರಿದ್ದೇವೆ. ನಮ್ಮ ಈ ಕಾರ್ಯಕ್ಕೆ ನಿಮ್ಮ ಸಹಕಾರವೂ ಇರಲಿ” ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿದ್ದರಾಮಯ್ಯ ಸರ್ಕಾರಕ್ಕೆ ವರ್ಷದ ಸಂಭ್ರಮ : ಬಿಜೆಪಿಯ ಪ್ಲ್ಯಾನ್ ಏನು ಗೊತ್ತಾ..?

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ 135 ಕ್ಷೇತ್ರದಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿ, ಸ್ವತಂತ್ರವಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು. ಇದೀಗ ಆ ಸಂತಸದ ಗಳಿಗೆಗೆ ಭರ್ತಿ ಒಂದು ವರ್ಷವಾಗುತ್ತಿದೆ. ಮೇ20ಕ್ಕೆ ಸರ್ಕಾರ ರಚನೆ ಮಾಡಿ

ಬಿಜೆಪಿ – ಜೆಡಿಎಸ್ ಪಕ್ಷದಿಂದ 25 ರಿಂದ 30 ಜನ  ನಮ್ಮ ಪಕ್ಷಕ್ಕೆ ಬರುತ್ತಾರೆ : ಚಿತ್ರದುರ್ಗದಲ್ಲಿ ಸಚಿವ ಸುಧಾಕರ್ ಹೇಳಿಕೆ

ವರದಿ ಮತ್ತು ಫೋಟೋ ಕೃಪೆ,  ಸುರೇಶ್ ಪಟ್ಟಣ್,                         ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

error: Content is protected !!