Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆ ಕೊರತೆಯ ನಡುವೆಯೂ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚನೆ..!

Facebook
Twitter
Telegram
WhatsApp

 

 

ಕರ್ನಾಟಕದಲ್ಲಿ ವಾಡಿಕೆಯಂತೆ ಮಳೆಯಾಗಿಲ್ಲ. ಮಳೆ ಇಲ್ಲದೆ ರೈತರು ಕಂಗಲಾಗಿದ್ದಾರೆ. ಬೆಳೆ ಅಂತು ಅನುಮಾನ, ಕುಡಿಯುವುದಕ್ಕೂ ನೀರಿಗೆ ಹಾಹಾಕಾರ ಶುರುವಾದರೆ ಹೇಗೆ ಎಂಬ ಚಿಂತನೆಯಲ್ಲಿದ್ದಾರೆ. ಇದರ ನಡುವೆ ತಮಿಳುನಾಡು ಮಾತ್ರ ತನ್ನ ಕ್ಯಾತೆ‌ ಮುಂದುವರೆಸಿದೆ. ನಮಗೆ ನೀರು ಬೇಕೆ ಬೇಕು ಎಂಬ ಹಠ ಮಾಡಿದೆ‌. ತಮಿಳುನಾಡಿನ ಪರವೇ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಇದೀಗ ಅನುಮತಿ ನೀಡಿದೆ.

ಕರ್ನಾಟಕಕ್ಕೆ ಪ್ರಾಧಿಕಾರ ಸೂಚನೆ ನೀಡಿದ್ದು, ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರನ್ನು ಹರಿಸಬೇಕೆಂದು ಸೂಚಿಸಿದೆ. ಮುಂದಿನ 15 ದಿನ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ಹರಿಸುವಂತೆ ತಿಳಿಸಿದೆ. ತಮಿಳುನಾಡಿನ ಬಿಳಿಗುಂಡ್ಲು ಮಾಪನ ಕೇಂದ್ರದಲ್ಲಿ 5000 ಕ್ಯೂಸೆಕ್ ದಾಖಲಾಗಬೇಕು. ಹೀಗಾಗಿ ನೀರು ಹರಿಸಲು ಸೂಚಿಸಿದೆ. ಈ ಹಿಂದೆ 15 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚಿಸಿತ್ತು. ಸದ್ಯ ಅದನ್ನು 10 ಸಾವಿರಕ್ಕೆ ಇಳಿಸಿದೆ.

ಇನ್ನು ನಾಳೆ ಈ ಸಂಬಂಧ ದೆಹಲಿಯಲ್ಲು ಸಭೆ ನಡೆಯಲಿದೆ. ಕರ್ನಾಟಕವೂ ನೀರು ಬಿಡುವ ವಿಚಾರದಲ್ಲಿ ಗಟ್ಟಿ ನಿರ್ಧಾರ ಹೇಳಲಿದೆ. ರಾಜ್ಯದ ಪರಿಸ್ಥಿತಿ ವಿವರಿಸಲಿದೆ. ಇದಾದ ನಂತರ ಸಭೆಯಲ್ಲಿ ಯಾವ ರೀತಿಯ ತೀರ್ಮಾನ ಮಾಡ್ತಾರೋ ನೋಡಬೇಕಿದೆ. ಆದ್ರೆ ತಮಿಳುನಾಡಿಗೆ ಪ್ರತಿ ದಿನ ನೀರು ಬಿಟ್ಟರೆ, ಕರ್ನಾಟಕ ಜನತೆ ನೀರಿಗಾಗಿ ಪರದಾಡ ಬೇಕಾಗುತ್ತದೆ. ಹೀಗಾಗಿ ಇಂಥ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬ ಕಾರಣಕ್ಕೆ ರೈತರು ಹೋರಾಟ ಮುಂದುವರೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮರದ ಕೊಂಬೆ ಬಿದ್ದು 24 ಗಂಟೆಯಾದರೂ ತೆರವುಗೊಳಿಸದ ನಗರಸಭೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

error: Content is protected !!