Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಮೇಜಾನ್ ಮ್ಯಾನೇಜರ್ ಮೇಲೆ ಗುಂಡಿನ ದಾಳಿ : ಚಿಕಿತ್ಸೆ ಫಲಿಸದೆ ಸಾವು..!

Facebook
Twitter
Telegram
WhatsApp

 

ದೆಹಲಿ: ರಾತ್ರಿ ಸಮಯದಲ್ಲಿ ಅಮೇಜಾನ್ ಸಂಸ್ಥೆಯ ಮ್ಯಾನೇಜರ್ ರನ್ನು ಗುಂಡಿಟ್ಟು ಕೊಂದ ಘಟನೆ ದೆಹಲಿಯಲ್ಲಿ ನಡೆದಿದೆ. ಹರ್ಪೀತ್ ಗಿಲ್ ಗುಂಡೇಟಿಗೆ ಬಲಿಯಾದ ಮ್ಯಾನೇಜರ್ ಆಗಿದ್ದಾರೆ. ದೆಹಲಿಯ ಶುಭಾಶ್ ವಿಹಾರ್ ಪ್ರದೇಶದಲ್ಲಿ ಈ ದುಷ್ಕೃತ್ಯ ನಡೆದಿದೆ.

ಹರ್ಪಿತ್ ಗಿಲ್ ತನ್ನ ಚಿಕ್ಕಪ್ಪನ ಜೊತೆಗೆ ಇದ್ದರು. ಶುಭಾಶ್ ವಿಹಾರ್ ಪ್ರದೇಶದಲ್ಲಿ ಇದ್ದಾಗ ದುಷ್ಕರ್ಮಿಗಳು ಬಂದು ಗುಂಡಿನ ದಾಳು ನಡೆಸಿದ್ದಾರೆ. ಗಿಲ್ ತಲೆಗೆ ಬಲವಾದ ಗುಂಡೇಟು ಬಿದ್ದಿದೆ. ಅವರ ಚಿಕ್ಕಪ್ಪನ ಮೇಲೂ ಗುಂಡಿನ ಸುರಿಮಳೆ ಗೈದಿದ್ದಾರೆ. ತಕ್ಷಣ ಅವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಲೆಗೆ ಗಂಭೀರ ಗುಂಡೇಟು ಬಿದ್ದ ಕಾರಣ ಹರ್ಪಿತ್, ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿತ್ತಾದರೂ ಬದುಕುಳಿಯಲಿಲ್ಲ. ಇನ್ನು ಅವರ ಚಿಕ್ಕಪ್ಪನಿಗೂ ದೇಹದ ಮೇಲೆ ಗುಂಡೇಟು ಬಿದ್ದು ಗಂಭೀರ ಗಾಯಗಳಾಗಿವೆ. ಸದ್ಯ ಅವರ ಚಿಕ್ಕಪ್ಪ ಸುಧಾರಿಸಿಕೊಳ್ಳುತ್ತಿದ್ದಾರೆ. ರಾತ್ರಿ ಸುಮಾರು 11.30 ಕ್ಕೆ ಫೈರಿಂಗ್ ನಡೆದಿದೆ. ಯಾರೋ ಐವರು ಬಂದು ಗುಂಡು ಹಾರಿಸಿ, ಪರಾರಿಯಾದರು ಎಂದು ಅವರ ಚಿಕ್ಕಪ್ಪ ತಿಳಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

error: Content is protected !!