Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲಕ್ಷ್ಮೀಸಾಗರ-ವಿಜಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ದಿಢೀರ್ ಭೇಟಿ

---Advertisement---

ಚಿತ್ರದುರ್ಗ,(ಆ.30) : ತಾಲ್ಲೂಕಿನ ಲಕ್ಷ್ಮೀಸಾಗರ-ವಿಜಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬುಧವಾರ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಸ್ವಚ್ಛತೆ, ಸಿಬ್ಬಂದಿ ಹಾಜರಾತಿ, ಔಷಧ ದಾಸ್ತಾನು ಪರಿಶೀಲಿಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಈ ಪ್ರಾಥಮಿಕ ಆರೋಗ್ಯ ಕೇಂದ್ರವು ಗ್ರಾಮೀಣ ಭಾಗದ ಜನರ ಆರೋಗ್ಯ ಸೇವೆ ಒದಗಿಸಲು ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಸಂಜೆ ಸಮಯದಲ್ಲೂ ಸಹ ಸಿಬ್ಬಂದಿಗಳು ಕರ್ತವ್ಯದಲ್ಲಿ ಹಾಜರಿರುವುದನ್ನು ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಆಸ್ಪತ್ರೆಯ ಹೊರ ಆವರಣ ಮತ್ತು ಒಳ ಆವರಣಗಳಲ್ಲಿ ಸ್ವಚ್ಛತೆ ಕಾಪಾಡಿರುವುದು, ರೋಗಿಗಳ ಜೊತೆ ಉತ್ತಮ ಸಮಾಲೋಚನೆ ನಡೆಸಿ, ಚಿಕಿತ್ಸೆ ನೀಡುತ್ತಿರುವುದನ್ನು ಗಮನಿಸಿ ವೈದ್ಯಾಧಿಕಾರಿಗಳಿಗೆ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಪ್ರಶಂಸಿದ ಅವರು, ಇದೇ ರೀತಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕರ್ತವ್ಯ ನಿರ್ವಹಿಸಿದರೆ, ಸರ್ಕಾರಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳಿಗೆ ಪೈಪೋಟಿ ನೀಡುವುದರಲ್ಲಿ ಸಂದೇಹವಿಲ್ಲ ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಯಶ್ರೀ ಮಾತನಾಡಿ, ತಾಲ್ಲೂಕು  ಆರೋಗ್ಯಾಧಿಕಾರಿ ಡಾ.ಟಿ.ಆರ್.ಮೇಘನಾ ಅವರ ಮಾರ್ಗದರ್ಶನದಲ್ಲಿ ಸಮಯ ಪರಿಪಾಲನೆ, ಪರಿಸರ ಸ್ವಚ್ಛತೆ, ಸಿಬ್ಬಂದಿ ಹಾಜರಾತಿ, ಔಷಧಿ ದಾಸ್ತಾನು ಖಾಲಿ ಆಗದಂತೆ ರೋಗಿಗಳಿಗೆ ತೊಂದರೆಯಾಗದಂತೆ ಸೇವೆ ಸಲ್ಲಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಪ್ರಯೋಗಶಾಲಾ ತಂತ್ರಜ್ಞ ಶಿವಮೂರ್ತಪ್ಪ, ಶುಶ್ರೂಷಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾತಾಧಿಕಾರಿಗಳು ಸೇರಿದಂತೆ ಮತ್ತಿತರರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment