ಚಿತ್ರದುರ್ಗ ಜಿಲ್ಲೆಗೆ ಅಬಕಾರಿ ಸಚಿವ ಮತ್ತು ಸಮಾಜ ಕಲ್ಯಾಣ ಸಚಿವರ ಪ್ರವಾಸ ಮತ್ತು ಕಾರ್ಯಕ್ರಮದ ವಿವರ

suddionenews
1 Min Read

 

ಚಿತ್ರದುರ್ಗ ಸೆ. 01 : ರಾಜ್ಯ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಸೆ. 03 ರಂದು ಚಿತ್ರದುರ್ಗ ಜಿಲ್ಲೆಗೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಚಿವರು ಅಂದು ಸಂಜೆ 04 ಗಂಟೆಗೆ ಚಳ್ಳಕೆರೆಗೆ ಆಗಮಿಸುವರು.

ಸಚಿವರು ಚಳ್ಳಕೆರೆಯಲ್ಲಿ ಜಿಲ್ಲಾ ಮಾದಿಕ ನೌಕರರ ಸಾಂಸ್ಕøತಿಕ ಸಂಘ, ಚಳ್ಳಕೆರೆ ಶಾಖೆ ಇವರು ಏರ್ಪಡಿಸಿರುವ ಪ್ರತಿಭಾ ಪುರಸ್ಕಾರ ಮತ್ತು ಸಚಿವರು, ಶಾಸಕರುಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಸಚಿವರ ಪ್ರವಾಸ ಕಾರ್ಯಕ್ರಮ

ಚಿತ್ರದುರ್ಗ ಸೆ. 01 : ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಸೆ. 04 ರಂದು ಚಿತ್ರದುರ್ಗ ಜಿಲ್ಲೆಗೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಅಂದು ಬೆಳಿಗ್ಗೆ ದಾವಣಗೆರೆಯಿಂದ ಹೊರಟು ಬೆ. 10.30 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸುವರು, ಬಳಿಕ ಇಲ್ಲಿನ ತ.ರಾ.ಸು. ರಂಗಮಂದಿರದಲ್ಲಿ ಏರ್ಪಡಿಸಲಾಗಿರುವ ಅಂಬೇಡ್ಕರ್ ಉತ್ಸವ ಹಾಗೂ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.

ಸಚಿವರು ಅದೇ ದಿನ ಮಧ್ಯಾಹ್ನ 03 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *