Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕವಾಡಿಗರಹಟ್ಟಿಯಲ್ಲಿ ಶುದ್ಧ ಕುಡಿಯುವ ನೀರಿಗಾಗಿ ರೂ. 3.07 ಕೋಟಿ ಅನುದಾನದಲ್ಲಿ ಏನೆಲ್ಲಾ ವ್ಯವಸ್ಥೆ ಮಾಡಲಾಗಿದೆ ? ಇಲ್ಲಿದೆ ಮಾಹಿತಿ…!

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಸುದ್ದಿಒನ್,ಚಿತ್ರದುರ್ಗ, ಸೆ.5: ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಿತ್ರದುರ್ಗ ನಗರದ ಕವಾಡಿಗರ ಹಟ್ಟಿಯಲ್ಲಿ ಮಂಗಳವಾರ ನಗರ ಸಭೆ ಹಾಗೂ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ ಪೈಪ್ ಲೈನ್ ಹಾಗೂ ಶುದ್ಧ ಕುಡುಯುವ ನೀರು ಘಟಕ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ನಗರ ಸಭೆಯ ರೂ 3.07 ಕೋಟಿ ಅನುದಾನದಲ್ಲಿ, ಇಡೀ ಕವಾಡಿಗರ ಹಟ್ಟಿಗೆ ಹೊಸದಾಗಿ ಪೈಪ್ ಲೈನ್ ಅಳವಡಿಕೆ, ಮನೆ ಮನೆಗೆ ಹೊಸ ನಳದ ಸಂಪರ್ಕ, 2.5 ಲಕ್ಷ ಲೀಟರ್ ಸಾಮರ್ಥ್ಯ ಓವರ್ ಹಡ್ ಟ್ಯಾಂಕ್ ಹಾಗೂ ಹಿರೇಕಂದವಾಡಿ ನೀರು ಶುದ್ದೀಕರಣ ಘಟಕದ ರಿಪೇರಿ ಮಾಡಲಾಗುವುದು.

ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ರೂ.16.50 ಲಕ್ಷ ಅನುದಾನದಲ್ಲಿ, ಕವಾಡಿಗರ ಹಟ್ಟಿಯಲ್ಲಿ ಹೊಸ ಬೋರವೆಲ್ ಕೊರೆಯುವುದರೊಂದಿಗೆ, 1 ಸಾವಿರ ಲೀಟರ್ ಸಾಮರ್ಥ್ಯದ ಶುದ್ಧ ಕುಡಿಯುವ ನೀರು ಘಟಕ ನಿರ್ಮಾಣ ಹಾಗೂ 5 ವರ್ಷ ಘಟಕದ ನಿರ್ವಹಣೆಯನ್ನು ಇಲಾಖೆ ಮಾಡಲಿದೆ.

ಇದೇ ಸಂದರ್ಭದಲ್ಲಿ ತಾತ್ಕಾಲಿಕ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಸುಧಾಕರ್ ಅವರು ಕಳೆದ 31 ದಿನಗಳಿಂದ ನಿರಂತರವಾಗಿ ಜನರಿಗೆ ಆರೋಗ್ಯ ಸೇವೆ ನೀಡುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ಅಭಿನಂದಿಸಿ ಮಾಹಿತಿ ಪಡೆದಕೊಂಡರು.

ಈ ಸಂದರ್ಭದಲ್ಲಿ  ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಸೇರಿದಂತೆ ನಗರ ಸಭೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬರ್ತ್ ಡೇ ಮುಗಿದು ವಾರವಾದರೂ ಬರ್ತಿವೆ ಗಿಫ್ಟ್ : ಅಷ್ಟೊಂದು ಸೀರೆಗಳನ್ನು ಸಂಗೀತಾಗೆ ಗಿಫ್ಟ್ ಮಾಡಿದ್ದು ಯಾರು..?

ಸಂಗೀತಾ ಶೃಂಗೇರಿ ಈಗ ಯಾರನ್ನೇ ಕೇಳಿದರೂ ಹೇಳುತ್ತಾರೆ. ಬಿಗ್ ಬಾಸ್ ನಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡವರು. ಎದುರಾಳಿಗಳಿಗೆ ತಿರುಗೇಟು ಕೊಟ್ಟವರು. ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದಾಗಲೇ ಕೊನೆಯ ಮೆಟ್ಟಿಲಿನ ತನಕ ಹೋಗಿ ವಾಪಾಸ್ ಬಂದವರು.

ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ಸಂಗೀತದ ಅಭಿರುಚಿ ಬೆಳೆಸಿಕೊಳ್ಳಬೇಕು: ಪ್ರೊ.ಬಿ.ಎಸ್.ಮಂಜುನಾಥ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ.21  :  ಪದವಿ ಶಿಕ್ಷಣ ಕಲಿಕೆಯ ಹಂತದಲ್ಲೆ ಕಲೆ, ಸಾಹಿತ್ಯ ಹಾಗೂ ಸಂಗೀತದ ಅಭಿರುಚಿ ಬೆಳೆಸಿಕೊಳ್ಳಬೇಕು

ಚಿತ್ರದುರ್ಗ | ಸಿಡಿಲಿಗೆ ಇಬ್ಬರ ಸಾವು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಮೇ. 21 : ಸೋಮುವಾರ ರಾತ್ರಿ ಗುಡುಗು ಸಹಿತ ಮಳೆ ಸುರಿದ್ದಿದ್ದು ಸಿಡಿಲು ಬಡಿದು ಮಹಾರಾಷ್ಟ್ರ

error: Content is protected !!