Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಸರಾ ವಿಚಾರದಲ್ಲಿ ಸರ್ಕಾರಕ್ಕೆ ಚಾಲೆಂಜ್ ಹಾಕಿದ ಪ್ರತಾಪ್ ಸಿಂಹ..!

---Advertisement---

 

ಮೈಸೂರು: ಸಂಭ್ರಮದ ದಸರಾ ಹಬ್ಬಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ ಮಹಿಷ ದಸರಾ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಸರ್ಕಾರಕ್ಕೆ ಚಾಲೆಂಜ್ ಹಾಕಿದ್ದಾರೆ. ಮಹಿಷ ದಸರಾ‌ ಮಾಡುವುದಕ್ಕೆ ಸರ್ಕಾರ ಅದೇಗೆ ಅವಕಾಶ ನೀಡುತ್ತದೆ ಎಂದು ನೋಡಿಯೇ ಬಿಡುತ್ತೀನಿ ಎಂದಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ ಮಹಿಷ ದಸರಾ ಮಾಡುವಂತೆ ಇಲ್ಲ. ಮಹಿಷ ದಸರಾ ಎಂಬ ಅಸಹ್ಯವನ್ನು, ಅಪದ್ಧವನ್ನು ಮಾಡುವುದಕ್ಕೆ ಹೊರಟಾಗ ಆತ್ಮಸಾಕ್ಷಿಗೆ ನೋವಾಗ ಬೇಕು ಅಲ್ಲವಾ..? ಯಾವುದೇ ಕಾರಣಕ್ಕೂ ಮಹಿಷ ದಸರಾ ಮಾಡುವುದಕ್ಕೆ ನಾನು ಬಿಡಲ್ಲ.

ಕಳೆದ ನಾಲ್ಕು ವರ್ಷಗಳಿಂದ ಮಹಿಷ ದಸರಾ ಮಾಡುವುದಕ್ಕೆ ಅವಕಾಶ ನೀಡಿಲ್ಲ. ಈ ಆಚರಣೆ‌ಮಾಡುವುದರ ವಿರುದ್ಧ ಮೈಸೂರಿನ‌ ನಿವಾಸಿಗಳು ಒಗ್ಗಟ್ಟಾಗಬೇಕಾಗಿದೆ. ಮಹಿಷ ದಸರಾ ಮಾಡುತ್ತಿದ್ದ ನಾಲ್ಕು ಜನರ ಮನೆಯಲ್ಲಿ ಹೋಗಿ ನೋಡಿ, ಈಗ ಅವರ ಮನೆಯಲ್ಲೂ ತಾಯಿ ಚಾಮುಂಡೇಶ್ವರಿಯನ್ನು ಪೂಜೆ ಮಾಡುತ್ತಿದ್ದಾರೆ. ಇವರಿಗೆ ಕನಿಷ್ಠ ಪಕ್ಷ ಅವರ ಭಾವನೆಗಳನ್ನಾದರೂ ಅರ್ಥ ಮಾಡಿಕೊಳ್ಳುವ ಸೌಜನ್ಯವಿರಬೇಕು. 2019ರಲ್ಲಿ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗಲೂ ಮಹಿಷ ದಸರಾಗೆ ಅವಕಾಶ ನೀಡಿರಲಿಲ್ಲ. ಈ ಆಚರಣೆಯಿಂದ ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆಯುಂಟಾಗುತ್ತದೆ. ಮನಸ್ಸುಗಳಿಗೆ ನೋವಾಗುತ್ತದೆ ಎಂದು ಪ್ರತಾಪ್ ಸಿಂಹ ರಾಜ್ಯ ಸರ್ಕಾರದ ಮೇಲೆ ಆಕ್ರೋಶ ಹೊರ ಹಾಕಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...