Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ವಿಚಾರ ಹೈಕಮಾಂಡ್ ತೀರ್ಮಾನ ಮಾಡಲಿದೆ : ಹರಿಪ್ರಸಾದ್ ಮಾತಿಗೆ ಪರಮೇಶ್ವರ್ ಪ್ರತಿಕ್ರಿಯೆ

Facebook
Twitter
Telegram
WhatsApp

 

 

ತುಮಕೂರು: ದಲಿತ ಸಿಎಂ ಆಗಬೇಕೆಂಬ ಕೂಗು ರಾಜ್ಯದಲ್ಲಿ ಆಗಾಗ ಕೇಳಿಸುತ್ತಲೇ ಇರುತ್ತದೆ. ಅದರಲ್ಲೂ ಜಿ ಪರಮೇಶ್ವರ್ ಅಂಗಳದಲ್ಲಿ ಸಿಎಂ ವಿಚಾರ ಸ್ಪ್ರಿಂಗ್ ಆಗುತ್ತಲೇ ಇರುತ್ತದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಮಂತ್ರಿ ಸ್ಥಾನ ಸಿಗದೆ ಹತಾಶರಾಗಿರುವ ಬಿಕೆ ಹರಿಪ್ರಸಾದ್ ಆಗಾಗ ಸಿದ್ದರಾಮಯ್ಯ ಅವರ ಮೇಲೂ ಆಕ್ರೋಶ ಹೊರ ಹಾಕುತ್ತಿರುತ್ತಾರೆ. ಇತ್ತಿಚೆಗೆ ಗೃಹ ಸಚಿವ ಪರಮೇಶ್ವರ್ ಅವರ ಪರ ಬ್ಯಾಟ್ ಬೀಸಿದ್ದರು.

ಗೃಹ ಸಚಿವ ಪರಮೇಶ್ವರ್ ಗೆ ಸಿಎಂ ಆಗಲು ಅರ್ಹತೆ ಇರುವಂತ ವ್ಯಕ್ತಿ. ಪರಮೇಶ್ವರ್ ಗೆ ಈ ಬಾರಿ ಡಿಸಿಎಂ ಸ್ಥಾನವನ್ನಾದರೂ ನೀಡಬೇಕಿತ್ತು. ಇದು ನಾವೂ ತಲೆ ತಗ್ಗಿಸುವಂತ ವಿಚಾರ ಎಂದಿದ್ದರು. ಇದಕ್ಕೆ‌ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿ, ಬಿಕೆ ಹರಿಪ್ರಸಾದ್ ಅವರು ಅಭಿಮಾನದಿಂದ ಈ ಮಾತನ್ನು ಹೇಳಿದ್ದಾರೆ.

ನಾನು ಸಿಎಂ ಆಗಬೇಕು ಎಂದು ಹೇಳಿದ ಬಿಕೆ ಹರಿಪ್ರಸಾದ್ ಗೆ ಅಭಿನಂದನೆ ಸಲ್ಲಿಸುತ್ತೇನೆ. ಬಹಳ ಮಂದಿಗೆ ನಾನು ಸಿಎಂ ಆಗಬೇಕು ಎಂಬ ಆಸೆ ಇದೆ. ಯಾರು ಸಿಎಂ ಆಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ. ಹೈಕಮಾಂಡ್ ತೀರ್ಮಾನದ ಮೇರೆಗೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರನ್ನು ಡಿಸಿಎಂ ಮಾಡಲಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!