Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಕ್ಷರಧಾಮ ದೇವಾಲಯದಲ್ಲಿ ಋಷಿ ಸುನಕ್ ದಂಪತಿಗಳ ವಿಶೇಷ ಪೂಜೆ

Facebook
Twitter
Telegram
WhatsApp

 

ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿರುವ ಯುಕೆ ಪ್ರಧಾನಿ ರಿಷಿ ಸುನಕ್ ಮತ್ತು ಅಕ್ಷತಾ ಮೂರ್ತಿ ಭಾನುವಾರ ಬೆಳಗ್ಗೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಜಿ20 ಶೃಂಗಸಭೆಯ ಎರಡನೇ ದಿನದ ಆರಂಭಕ್ಕೂ ಮುನ್ನ ರಿಷಿ ಸುನಕ್‌ದೇವಸ್ಥಾನಕ್ಕೆ ಭೇಟಿ ನೀಡುವ ಮುನ್ನ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಅಕ್ಷರಧಾಮದಲ್ಲಿ, ರಿಷಿ ಮತ್ತು ಅಕ್ಷತಾ ಪೂಜೆ ಸಲ್ಲಿಸಿದ ನಂತರ ದೇವಾಲಯದ ಮಾದರಿಯನ್ನು ಅವರಿಗೆ ಉಡುಗೊರೆಯಾಗಿ ನೀಡಲಾಯಿತು.

ನಾನು ಹಿಂದೂ ಎಂದು ಹೇಳಿಕೊಳ್ಳಲು ಹೆಮ್ಮೆಪಡುತ್ತೇನೆ ಎಂದು ಭಾರತಕ್ಕೆ ಬರುವ ಮುನ್ನ ಪ್ರತಿಕ್ರಿಯಿಸಿದ್ದ ರಿಷಿ, ಭಾರತಕ್ಕೆ ಬಂದ ನಂತರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಯವರ ಬಗ್ಗೆ ನನಗೆ ಅಪಾರ ಗೌರವವಿದೆ ಮತ್ತು ಜಿ 20 ಶೃಂಗಸಭೆಯನ್ನು ಅದ್ಧೂರಿಯಾಗಿ ಮಾಡಲು ಅವರಿಗೆ ಬೆಂಬಲಿಸುವುದಾಗಿ ರಿಷಿ ಸುನಕ್ ಹೇಳಿದ್ದಾರೆ.

ಈ ವರ್ಷ ಜನ್ಮಾಷ್ಟಮಿ ಆಚರಿಸಲು ಸಾಧ್ಯವಾಗಲಿಲ್ಲ ಎಂದು ರಿಷಿ ಸುನಕ್ ಬೇಸರ ವ್ಯಕ್ತಪಡಿಸಿದರು. ಭಾರತಕ್ಕೆ ಬಂದ ನಂತರ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಆಗಲೇ ಹೇಳಿದ್ದರು. ರಿಷಿ ಸುನಕ್ ಅವರು ಹಿಂದೂ ಎಂಬುದಕ್ಕೆ ಹೆಮ್ಮೆಪಡುತ್ತೇನೆ ಎಂದು ಹೇಳಿದರು. ಧಾರ್ಮಿಕ ನಂಬಿಕೆಗಳು ಬಹಳ ಮುಖ್ಯ.ದೇವರ ಮೇಲಿನ ನಂಬಿಕೆ ಒತ್ತಡದಿಂದ ಹೊರಬರಲು ಸಾಕಷ್ಟು ಶಕ್ತಿಯನ್ನು ನೀಡುತ್ತದೆ‌ ಎಂದರು.

ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ, ರಿಷಿ ಸುನಕ್ ರಾಜ್‌ಘಾಟ್‌ಗೆ ತೆರಳಿದರು. ಜಿ20 ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಅವರು ಮಹಾತ್ಮ ಗಾಂಧಿ ಅವರ ಸಮಾಧಿಗೆ ಗೌರವ ಸಲ್ಲಿಸಿದರು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಯುಕೆ ಪ್ರಧಾನಿಯಾಗಿ ರಿಷಿ ಸುನಕ್ ಅಧಿಕಾರ ವಹಿಸಿಕೊಂಡರು. ಅವರು ಪ್ರಧಾನಿಯಾಗಿ ಭಾರತಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಜಿ20 ಶೃಂಗಸಭೆಗಾಗಿ ಅವರು ಶುಕ್ರವಾರ ದೆಹಲಿಗೆ ಬಂದಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!