Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೆಪ್ಟೆಂಬರ್ 12 ರಂದು ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಸಮಾಜಶಾಸ್ತ್ರ ಅಧ್ಯಾಪಕರಿಗೆ ಪಠ್ಯಕ್ರಮ ಕಾರ್ಯಾಗಾರ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆ.10 : ಪದವಿ ವಿಧ್ಯಾರ್ಥಿಗಳಿಗೆ 5 ಮತ್ತು 6 ನೇ ಸೆಮಿಸ್ಟರ್ ನ ಸಮಾಜಶಾಸ್ತ್ರ ಪಠ್ಯಕ್ರಮ ಕಾರ್ಯಾಗಾರವನ್ನು ದಾವಣಗೆರೆ ವಿ.ವಿ‌.ವ್ಯಾಪ್ತಿಯ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಸಮಾಜಶಾಸ್ತ್ರ ಅಧ್ಯಾಪಕರಿಗೆ ಸೆಪ್ಟೆಂಬರ್ 12 ರಂದು ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆಯಲಿದೆ.

ದಾವಣಗೆರೆ ವಿಶ್ವವಿದ್ಯಾಲಯ ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗ,ಮತ್ತು ದಾವಣಗೆರೆ ವಿಶ್ವವಿದ್ಯಾಲಯ ಸಮಾಜಶಾಸ್ತ್ರ ಅಧ್ಯಾಪಕರ ಸಂಘ.(ರಿ)ದಾವಣಗೆರೆ ಇವರ ಸಹಯೋಗದೊಂದಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರೊ. ಎ.ರಾಮೇಗೌಡ,ವಿಶ್ರಾಂತ ಸಮಾಜಶಾಸ್ತ್ರ ಪ್ರಾಧ್ಯಾಪಕರು, ಕುವೆಂಪು ವಿಶ್ವವಿದ್ಯಾಲಯ, ಶಿವಮೊಗ್ಗ ಇವರು ನೆರೆವೇರುಸುವರು. ಅಧ್ಯಕ್ಷತೆಯನ್ನು ಪ್ರೊ.ಬಿ.ಟಿ.ತಿಪ್ಪೇರುದ್ರಸ್ವಾಮಿ, ಪ್ರಾಂಶುಪಾಲರು, ಸರ್ಕಾರಿ ಕಲಾ ಕಾಲೇಜು, ಚಿತ್ರದುರ್ಗ ವಹಿಸುವರು.

ಡಾ.ಹುಚ್ಚೆಗೌಡ, ಸಂಯೋಜಕರು, ಸಮಾಜಶಾಸ್ತ್ರ ವಿಭಾಗ, ದಾವಣಗೆರೆ ವಿ.ವಿ.ತೋಳಹುಣಸೆ, ದಾವಣಗೆರೆ, ಡಾ.ಧನಂಜಯ, ಜಿ.ಬಿ.ಪ್ರಾಂಶುಪಾಲರು, ಸ.ಪ್ರ.ದ.ಕಾಲೇಜು, ಹೊನ್ನಾಳಿ, ಪ್ರೊ.ಜಿ.ಡಿ.ಸುರೇಶ್, ಐ.ಕ್ಯೂ.ಎ.ಸಿ
ಸಂಚಾಲಕರು, ಡಾ.ಹೆಚ್.ತಿಪ್ಪೇಸ್ವಾಮಿ,  ಕಾರ್ಯದರ್ಶಿ, ದಾವಣಗೆರೆ ವಿ.ವಿ.ಸಮಾಜಶಾಸ್ತ್ರ ಅಧ್ಯಾಪಕರ ಸಂಘ,
ಪ್ರೊ.ಎಲ್.ನಾಗರಾಜಪ್ಪ, ಕಾರ್ಯದರ್ಶಿ, ಅಧ್ಯಾಪಕರ ಸಂಘ, ಸರ್ಕಾರಿ ಕಲಾ ಕಾಲೇಜು, ಗೆಜೆಟೆಡ್ ಮ್ಯಾನೇಜರ್ ಮಾರ್ಟಿನ್ ಸ್ಯಾಮುಯೆಲ್‌ ವೇದಿಕೆಯಲ್ಲಿ ಇರುತ್ತಾರೆ.

ಡಾ.ಧರಣೇಂದ್ರಯ್ಯ ಇವರ ಅಧ್ಯಕ್ಷತೆಯಲ್ಲಿ ಅಂತಿಮ ಪದವಿಯ ವಿವಿಧ ಪತ್ರಿಕೆಗಳನ್ನು ಡಾ.ಟಿ.ಮಂಜುಳಾ, ಡಾ.ಕೆ.ಸಿ.ಶರಣಪ್ಪ, ಡಾ.ಸರೇಶ್.ಸಿ ಪದವಿ ಐದನೇ ಸೆಮಿಸ್ಟರ್ ನ ಸಮಾಜಶಾಸ್ತ್ರದ ಪದವಿ ಪತ್ರಿಕೆಗಳನ್ನು

ಪ್ರೊ.ಸಿ.ವೈ. ಯಶೋಧ ಅವರ ಅಧ್ಯಕ್ಷತೆಯಲ್ಲಿ ಡಾ.ತಿಪ್ಪೇಸ್ವಾಮಿ, ಡಾ.ಸಿದ್ದಪ್ಪ ಡಿ.ಓ.ಪ್ರೊ.ಟಿ.ನಾಗರಾಜ್ ಆರನೇ ಸೆಮಿಸ್ಟರ್ ನ ಸಮಾಜಶಾಸ್ತ್ರದ ಪದವಿ ಪತ್ರಿಕೆಗಳನ್ನು ಮಂಡಿಸಲಿದ್ದಾರೆ.

ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ.ಶ್ಯಾಮರಾಜ ಟಿ, ಸಹ ಸಂಚಾಲಕರು ಪ್ರೊ.ಎಸ್.ಆನಂದ, ಪ್ರೊ‌.ನಯಾಜ್ ಅಹಮದ್ ಹಾಗೂ ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಸಮಾಜಶಾಸ್ತ್ರ ಅಧ್ಯಾಪಕರು ಈ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾರ್ಯಾಗಾರದ ಸಂಚಾಲಕ ಹಾಗೂ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಸ್.ಆರ್.ಲೇಪಾಕ್ಷ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ :
ಡಾ.ಎಸ್.ಆರ್.ಲೇಪಾಕ್ಷ,ಸಂಚಾಲಕರು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು, ಸರ್ಕಾರಿ ಕಲಾ ಕಾಲೇಜು, ಚಿತ್ರದುರ್ಗ, 9986572664 ಸಂಪರ್ಕಿಸಲು ಕೋರಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment