Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಾರತ – ಪಾಕ್ ಪಂದ್ಯ ನೋಡಲು ಪ್ರೇಕ್ಷಕರೇ ಇಲ್ಲ.. ಇದು ಇತಿಹಾಸದಲ್ಲಿಯೇ ಫಸ್ಟ್ ಟೈಮ್..!

---Advertisement---

ಇಂದು ಶ್ರೀಲಂಕಾದಲ್ಲಿ ಭಾರತ – ಪಾಕಿಸ್ತಾನದ ಪಂದ್ಯ ನಡೆಯುತ್ತಿದೆ. ಭಾರತ – ಪಾಕಿಸ್ತಾನದ ಪಂದ್ಯ ಎಂದರೆ ಅದು ಹೈವೋಲ್ಟೇಜ್ ಪಂದ್ಯವಾಗಿರುತ್ತದೆ. ಬೇರೆ ಯಾವ ಮ್ಯಾಚ್ ಗೂ ಸೇರದಷ್ಟು ಅಭಿಮಾನಿಗಳು ಈ ಪಂದ್ಯಕ್ಕೆ ಸೇರಿರುತ್ತಾರೆ. ಆದರೆ ಇವತ್ತಿನ ಮ್ಯಾಚ್ ನಲ್ಲಿ ಪ್ರೇಕ್ಷಕರ ಗ್ಯಾಲರಿ ಖಾಲಿ ಇದ್ದದ್ದು ಕಂಡು ಬಂದಿದೆ.

ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುತ್ತಿರುವ 16ನೇ ಸೀಸನ್ ನಲ್ಲಿ ಇಂಥಹ ಕೆಲವು ದೃಶ್ಯಗಳು ಕಂಡು ಬಂದಿದೆ. ಸೂಪರ್-4 ಸ್ಪರ್ಧೆ ಮುಂದುವರೆದಿದ್ದು, ಕೊಲಂಬೋದಲ್ಲಿ ಭಾರತ-ಪಾಕ್ ಮುಖಾಮುಖಿಯಾಗಿದ್ದಾರೆ. ಆದರೆ ಪ್ರೇಕ್ಷಕರ ಗ್ಯಾಲರಿಯಲ್ಲಿ ಜನಗಳೇ ಕಾಣಿಸುತ್ತಿಲ್ಲವಾಗಿದೆ.

ಕೆಲ ಸ್ಟ್ಯಾಂಡ್ ಗಳು ಸಂಪೂರ್ಣ ಖಾಲಿ ಇರುವ ಫೋಟೋಗಳನ್ನು ಪಾಕಿಸ್ತಾನದ ಆಲ್ ರೌಂಡರ್ ಮೊಹಮ್ಮದ್ ಹಫೀಜ್ ಹಂಚಿಕೊಂಡಿದ್ದಾರೆ. ಅವರು ಹಂಚಿಕೊಂಡಿರುವ ಹಲವು ಫೋಟೋಗಳಲ್ಲಿ ಪ್ರೇಕ್ಷಕರ ಗ್ಯಾಲರಿಗಳು ಖಾಲಿ ಇದೆ. ‘ಪಾಕಿಸ್ತಾನ ಮತ್ತು ಭಾರತದ ಪಂದ್ಯದ ಬಗ್ಗೆ ಕ್ರಿಕೆಟ್ ಅಭಿಮಾನಿಗಳು ಈ ರೀತಿ ಪ್ರತಿಕ್ರಿಯೆಯನ್ನು ಹಿಂದೆಂದೂ ನೋಡಿರಲಿಲ್ಲ’ ಎಂದು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಪಂದ್ಯದ ವೇಳೆ ಮಳೆ ಬೇರೆ ಬರುತ್ತಿದೆ. ಮಳೆಯ ನಡುವೆ ಪಂದ್ಯ ಕೂಡ ಕೆಲವೊಮ್ಮೆ ಅನುಮಾನವಾಗಿದೆ. ಹೀಗಾಗಿ ಪ್ರೇಕ್ಷಕರು ಕಡಿಮೆ ಆಗಿರಬಹುದಾ ಎಂದು ಕೂಡ ಹಲವರು ವ್ಯಾಖ್ಯಾನಿಸಿದ್ದಾರೆ. ಆದರೆ ಇಂಥ ಹೈವೋಲ್ಟೇಜ್ ಪಂದ್ಯದಲ್ಲಿ ವೀಕ್ಷಕರೇ ಇಲ್ಲದೆ ಇರುವುದು ಇತಿಹಾಸದಲ್ಲಿ ಮೊದಲು ಎಂದು ಎಲ್ಲರೂ ಹೇಳುತ್ತಿದ್ದಾರೆ.

ಭಾರತ vs ಪಾಕಿಸ್ತಾನ ಏಷ್ಯಾ ಕಪ್ 2023 ಲೈವ್ ಸ್ಕೋರ್ : ಭಾರೀ ಮಳೆಯಿಂದಾಗಿ ಭಾನುವಾರ ಭಾರತ ಮತ್ತು ಪಾಕಿಸ್ತಾನ ನಡುವಿನ ಮಾರ್ಕ್ಯೂ ಏಷ್ಯಾ ಕಪ್ ಹಣಾಹಣಿಯಲ್ಲಿ ಆಟವನ್ನು ನಿಲ್ಲಿಸಲಾಗಿದೆ. ಇಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ಮಳೆ ಸುರಿದಾಗ ಭಾರತ 24.1 ಓವರ್‌ಗಳಲ್ಲಿ 2 ವಿಕೆಟ್‌ಗೆ 147 ರನ್ ಗಳಿಸಿತ್ತು.

ಆರಂಭಿಕರಾದ ರೋಹಿತ್ ಶರ್ಮಾ (56) ಮತ್ತು ಶುಭಮನ್ ಗಿಲ್ (58) ಅರ್ಧಶತಕಗಳ ನೆರವಿನಿಂದ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಕ್ರಮವಾಗಿ 8 ಮತ್ತು 17 ರನ್ ಗಳಿಸಿದರು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment