Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

“ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಚಾಲನೆ : ಈ ಅಭಿಯಾನದ ಉದ್ದೇಶವೇನು ? ‌

Facebook
Twitter
Telegram
WhatsApp

ಚಿತ್ರದುರ್ಗ .11: “ನನ್ನ ಮಣ್ಣು ನನ್ನ ದೇಶ” ದೇಶದ ಭಕ್ತಿಯನ್ನು ದೇಶದ ಮೂಲೆಮೂಲೆಗೆ ಪಸರಿಸುವ ಕಾರ್ಯಕ್ರಮ ಇದಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರು ಹಾಗೂ ಸಂಸದ ಎ.ನಾರಾಯಣಸ್ವಾಮಿ ಹೇಳಿದರು.

ನಗರದ ಜೆಸಿಆರ್ ಬಡಾವಣೆಯ ಗಣಪತಿ ದೇಗುಲದಲ್ಲಿ ಸೋಮವಾರ ಪೂಜೆ ಸಲ್ಲಿಸಿ, “ನನ್ನ ಮಣ್ಣು ನನ್ನ ದೇಶ” ಅಭಿಯಾನಕ್ಕೆ ಚಾಲನೆ ನೀಡಿ, ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಅಪೇಕ್ಷೆಯಂತೆ “ನನ್ನ ಮಣ್ಣು ನನ್ನ ದೇಶ” ಪರಿಕಲ್ಪನೆಯಲ್ಲಿ  ದೇಶದ ಭಕ್ತಿಯನ್ನು ದೇಶದ ಮೂಲೆಮೂಲೆಗೆ ಪಸರಿಸಬೇಕು.

ಯುವ ಪೀಳಿಗೆಗೆ ದೇಶದ ಮಣ್ಣಿನ ಸತ್ವವನ್ನೂ ಪ್ರತಿ ಮನೆಗೆ, ಯುವಶಕ್ತಿಗೆ ತಲುಪಿಸಬೇಕು ಎಂಬುದು ಮೋದಿಯವರ ಕನಸು. ಇದರ ಜೊತೆ ಜೊತೆಗೆ ದೇಶದ ಸೇನಾನಿಗಳು, ದೇಶದ ಸೈನಿಕರು ದೇಶಕ್ಕೆ ಮಾಡಿದ ತ್ಯಾಗವನ್ನು, ಸ್ವಾತಂತ್ರ್ಯ ಹೋರಾಟ ಸ್ಮರಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ, ಸೇನಾನಿಗಳ ಸಮರ್ಪಣಾಭಾವಕ್ಕಾಗಿ, ಅಮೃತ ಮಹೋತ್ಸವದ ಅಂಗವಾಗಿ ದೆಹಲಿಯಲ್ಲಿ “ಅಮೃತ ವನ” ನಿರ್ಮಿಸಲಾಗುತ್ತಿದೆ. ಗೌರವಯುತವಾಗಿ ದೇಶದ ಪ್ರತಿ ಮೂಲೆಯ ಭೂತಾಯಿ ಮಣ್ಣನ್ನು ತರಿಸಿ ಉದ್ಯಾನ ನಿರ್ಮಾಣ ಮಾಡಿ ವಿಶ್ವಕ್ಕೆ ಸಮರ್ಪಣೆ ಮಾಡುವ ಕಾರ್ಯಕ್ರಮ ಇದಾಗಿದೆ ಎಂದರು.

ದೇಶದ ರಕ್ಷಣೆಯಲ್ಲಿ ಭಾಗವಹಿಸಿದ ಸೇನಾನಿಗಳು, ಸೈನಿಕರು, ಪೊಲೀಸರು, ಪ್ಯಾರಾ ಮಿಲಿಟರಿ ಸೇರಿದಂತೆ  ಇಡೀ ಜಿಲ್ಲೆಯ ಸೇನಾನಿಗಳ ಮನೆಗಳಿಗೆ ಭೇಟಿ ನೀಡಿ, ದೇಶಕ್ಕಾಗಿ ಹೋರಾಟ ಮಾಡಿದ ಅವರ ಅನುಭವಗಳನ್ನು ಹಂಚಿಕೊಳ್ಳಲಾಗುವುದು. ದೇಶಭಕ್ತಿಯನ್ನು ಈ ದೇಶದ ಪ್ರತಿ ಯುವಕರಿಗೆ ಮುಟ್ಟುವ ರೀತಿಯಲ್ಲಿ ಭಾರತಾಂಭೆಯ ಈ ಮಣ್ಣನ್ನು ದೆಹಲಿಯಲ್ಲಿ ಇಡೀ ದೇಶದ ಪ್ರತಿ ಮೂಲೆಯಿಂದ ಮಣ್ಣು ಶೇಖರಿಸಿ ದೇಶದ ವೀರ  ಯೋಧರ ಅಮೃತ ವನದಲ್ಲಿ ಸೇರಿಸಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಚಿತ್ರದುರ್ಗ ನಗರದ ಜೆಸಿಆರ್ ಬಡಾವಣೆಯ ಗಣಪತಿ ದೇಗುಲ ಪುಣ್ಯ ಸ್ಥಳದಿಂದ “ನನ್ನ ಮಣ್ಣು ನನ್ನ ದೇಶ” ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಈ ಪವಿತ್ರವಾದ ಮಣ್ಣನ್ನು ಜಿಲ್ಲೆಯ ಹಳ್ಳಿ ಹಳ್ಳಿಗಳಿಂದ, ಪವಿತ್ರ ಸ್ಥಳಗಳಿಂದ, ದೇವಸ್ಥಾನಗಳಿಂದ, ದೇಶಕ್ಕಾಗಿ ಪ್ರಾಣ ಸಮರ್ಪಣೆ, ದೇಶಕ್ಕಾಗಿ ಸೇವೆ ಸಲ್ಲಿಸಿದ ಯೋಧರ ಮನೆಗಳಿಂದ ಪವಿತ್ರ ಮಣ್ಣನ್ನು ಸಂಗ್ರಹ ಮಾಡಿ ಸುಮಾರು 45 ದಿನಗಳ ಕಾಲ ಅಭಿಯಾನ ಜಿಲ್ಲೆಯಲ್ಲಿ ನಡೆಯಲಿದೆ. ಇದೇ ರೀತಿಯಾದ ಅಭಿಯಾನ ಈಗಾಗಲೇ ರಾಜ್ಯ ಹಾಗೂ ದೇಶದಲ್ಲಿ ನಡೆಯುತ್ತಿದೆ.

ಅಕ್ಟೋಬರ್ ಮೂರನೇ ವಾರದಲ್ಲಿ ಬೆಂಗಳೂರಿಗೆ ಪವಿತ್ರ ಮಣ್ಣನ್ನು ತಲುಪಿಸಿ, ಅಲ್ಲಿಂದ ಅಕ್ಟೋಬರ್ 25ರಂದು ನವದೆಹಲಿಗೆ ತಲುಪಿಸಿ, ನವದೆಹಲಿಯಲ್ಲಿ ನಿರ್ಮಾಣ ಮಾಡಲಿರುವ ಅಮೃತ ವನವನ್ನು 75 ವರ್ಷಗಳ ಸ್ವಾತಂತ್ರ್ಯದ ಆಚರಣೆಯನ್ನು ದೇಶದ ಯೋಧರಿಗೆ, ದೇಶಕ್ಕಾಗಿ ಹೋರಾಟ ಮಾಡಿದವರಿಗೆ ಸಮರ್ಪಣೆ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 30ರಂದು ನವದೆಹಲಿಯ ಕರ್ತವ್ಯ ಪಥದಲ್ಲಿ ಅಮೃತ ವನವನ್ನು ದೇಶಕ್ಕೆ ಸಮರ್ಪಣೆ ಮಾಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಜೆಸಿಆರ್ ಬಡಾವಣೆಯ ಗಣಪತಿ ದೇಗುಲದ ಪದಾಧಿಕಾರಿಗಳು, ಮುಖಂಡರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!