Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೇಡಿಕೆ ಈಡೇರಿಕೆ ಸಚಿವರ ಭರವಸೆ : ಪ್ರತಿಭಟನೆ ಹಿಂತೆಗೆದುಕೊಂಡ ಖಾಸಗಿ ಬಸ್ ಮಾಲೀಕರು

Facebook
Twitter
Telegram
WhatsApp

 

ಬೆಂಗಳೂರು: 32 ಬೇಡಿಕೆಗಳನ್ನು ಮುಂದಿಟ್ಟು ಇಂದು ಬೆಂಗಳೂರು ಬಂದ್ ಮಾಡಿದ್ದರು ವಾಹನ ಚಾಲಕರು. ಆಟೋ ಡ್ರೈವರ್, ಕ್ಯಾಬ್ ಡ್ರೈವರ್, ಖಾಸಗಿ ಬಸ್ ಮಾಲೀಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರತಿಭಟನಾಕಾರರನ್ನು ಸಂಧಾನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ ಅವರು ನೀಡಿದ ಭರವಸೆಗಳಿಗೆ ಖಾಸಗಿ ಸಾರಿಗೆ ಒಕ್ಕೂಟ ಬಂದ್ ಅನ್ನು ಹಿಂತೆಗೆದುಕೊಂಡಿದೆ.

ಇದಾದ ಬಳಿಕ ಮಾತನಾಡಿರುವ ಸಚಿವ ರಾಮಲಿಂಗಾರೆಡ್ಡಿ, ಖಾಸಗಿ ಸಾರಿಗೆಯವರ ಕೆಲ ಬೇಡಿಕೆಗಳನ್ನು ಈಡೇರಿಸಿವುದಕ್ಕೆ ಒಪ್ಪಿಗೆ ಸೂಚಿಸಿದ್ದೇವೆ. ಕೆಲ ಬೇಡಿಕೆಗಳನ್ನು ಈಡೇರಿಸುವುದಕ್ಕೆ ಸಮಯ ಬೇಕಾಗುತ್ತದೆ. ಯಾವುದೇ ಅನುಮತಿ ಇಲ್ಲದೆ, ಬೈಕ್, ಟ್ಯಾಕ್ಸಿ ಓಡಿಸುತ್ತಿದ್ದಾರೆ. ಸದ್ಯದಲ್ಲಿಯೇ ಹೊಸ ಆ್ಯಪ್ ಮಾಡಿಕೊಡುತ್ತೇವೆ ಎಂದಿದ್ದಾರೆ.

ಇನ್ನು ಪ್ರತಿಭಟನೆ ಕೈಬಿಟ್ಟ ಬಳಿಕ ಮಾತನಾಡಿದ ಖಾಸಗಿ ಸಾರಿಗೆ ಒಕ್ಕೂಟಗಳ ಅಧ್ಯಕ್ಷ ನಟರಾಜ್ ಶರ್ಮಾ, 32 ಬೇಡಿಕೆ ಇಟ್ಟಿದ್ದೆವು. ಅದರಲ್ಲಿ 27 ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿದೆ. ಹೀಗಾಗಿ ಬಂದ್ ವಾಪಸ್ ಪಡೆಯುತ್ತಿದ್ದೇವೆ. ಟ್ಯಾಕ್ಸ್ ವಿಚಾರವಾಗಿಯೂ ಸಚಿವ ರಾಮಲಿಂಗಾ ರೆಡ್ಡಿ ಅವರು ಭರವಸೆ ನೀಡಿದ್ದಾರೆ ಎಂದಿದ್ದಾರೆ.

ಸದ್ಯಕ್ಕೆ ಖಾಸಗಿ ಬಸ್ ಮಾಲೀಕರು ಸಚಿವರ ಭರವಸೆಗೆ ಹೋರಾಟವನ್ನು ಕೈಬಿಟ್ಟಿದ್ದಾರೆ. ಆದರೆ ಬೇಡಿಕೆ ಈಡೇರಿಸದೆ ಇದ್ದಲ್ಲಿ ನಾಡಿದ್ದು ಮತ್ತೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!