Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈಡೇರಿಸುವಂತ ಬೇಡಿಕೆ ಕೇಳಿದರೆ ಓಕೆ.. ಆದ್ರೆ : ಚಾಲಕರ ಪ್ರತಿಭಟನೆ ಬಗ್ಗೆ ಸಿದ್ದರಾಮಯ್ಯ ರಿಯಾಕ್ಷನ್

Facebook
Twitter
Telegram
WhatsApp

 

ಮೈಸೂರು : ಇಂದು ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಟೋ ಚಾಲಕರು, ಕ್ಯಾಬ್ ಚಾಲಕರು, ಖಾಸಗಿ ಬಸ್ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ಕೆಲವು ಸ್ಥಳಗಳಿಗೆ ಹೋಗುವುದಕ್ಕೆ ಜನರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿದೆ. ಹೆಚ್ಚುವರಿಯಾಗಿ ಬಿಎಂಟಿಸಿ ಬಸ್ ಗಳನ್ನು ಸರ್ಕಾರ ಬಿಟ್ಟಿದೆ. ಇದೀಗ ಚಾಲಕರ ಪ್ರತಿಭಟನೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಈಡೇರಿಸುವಂತಹ ಬೇಡಿಕೆಗಳನ್ನು ಕೇಳಿದರೆ ಹೇಗಾದರೂ ಈಡೇರಿಸಬಹುದು. ಆದರೆ ಇವರು ಈಡೇರಿಸುವುದಕ್ಕೆ ಆಗದೆ ಇರುವಂತಹ ಬೇಡಿಕೆ ಕೇಳುತ್ತಿದ್ದಾರೆ. ರಾಜ್ಯದಲ್ಲಿ ಮಹಿಳೆಯರಿಗೆ ಅನುಕೂಲವಾಗಲಿ ಎಂದು ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಆದರೆ ಅದರಿಂದ ನಷ್ಟ ಆಗುತ್ತಿದೆ ಎಂದು ಇವರ ವಾದವಾಗಿದೆ. ಖಾಸಗಿ ವಾಹನ ಮಾಲೀಕರ ಡಿಮ್ಯಾಂಡ್ ಸರಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೇಸರ ಹೊರ ಹಾಕಿದ್ದಾರೆ.

ನಷ್ಟ ಆಗುವುದು, ಬಿಡುವುದು ಬೇರೆ ಮಾತು. ಅದನ್ನು ತುಂಬಿಕೊಡಿ ಎಂದರೆ ಅದು ಸಾಧ್ಯವಾ..? ಅದು ಸಾಧ್ಯವಾಗದೆ ಇರುವ ಮಾತು. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಅದನ್ನು ಹತ್ತಿಕ್ಕುವ ಅಧಿಕಾರ ಯಾರಿಗೂ ಇಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ ಎಂದು ಸಲಹೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಬಸ್ ಗಳಿಗೆ ಜನ ಬರುತ್ತಿಲ್ಲ, ಆಟೋಗಳಿಗೆ ಜನ ಹತ್ತುತ್ತಿಲ್ಲ ಎಂಬುದು ಬಸ್ ಮಾಲೀಕರ ಹಾಗೂ ಆಟೋ ಚಾಲಕರ ವಾದವಾಗಿದೆ. ಶಕ್ತಿ ಯೋಜನೆಯ ಲಾಭವನ್ನು ಖಾಸಗಿ ಬಸ್ ಗಳಿಗೂ ವಿಸ್ತರಿಸಿ ಎಂದು ಡಿಮ್ಯಾಂಡ್ ಇಟ್ಟಿದ್ದಾರೆ. ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ, ಇಂದು ಬೆಂಗಳೂರು ಬಂದ್ ಹೆಸರಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!