Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

KRS ಡ್ಯಾಂನಲ್ಲಿ ದಿನೇ ದಿನೇ ಇಳಿಮುಖವಾಗ್ತಿದೆ ನೀರು : ಇಂದಿನ ಮಟ್ಟ ಎಷ್ಟಿದೆ ಗೊತ್ತಾ..?

Facebook
Twitter
Telegram
WhatsApp

 

ಮಂಡ್ಯ: ವಾಡಿಕೆಯಂತೆ ಮಳೆ ಬಂದಿದ್ದರೆ ರಾಜ್ಯದ ಎಲ್ಲಾ ಡ್ಯಾಂಗಳು ತುಂಬಬೇಕಿತ್ತು. ಆದರೆ ಮಳೆ ಕಾಣದಂತೆ ಮಾಯಾವಾಗಿದೆ. ಹೀಗಾಗಿ ಕೃಷಿಗೆ ಇರಲಿ ಕುಡಿಯುವ ನೀರಿಗೂ ಹಾಹಾಕಾರದ ಭಯ ಶುರುವಾಗಿದೆ. ಅದರಲ್ಲೂ ಕಾವೇರಿ ನೀರು ಕಡಿಮೆಯಾದರೆ ಇಡೀ ಬೆಂಗಳೂರಿನ ಜನತೆ ನೀರಿನ ಸಮಸ್ಯೆ ಎದುರಿಸುತ್ತಾರೆ. ಮಳೆಯಿಲ್ಲದೆ ಕಾವೇರಿಯಲ್ಲಿ ದಿನೇ ದಿನೇ‌ ನೀರು ಕಡಿಮೆಯಾಗುತ್ತಲೆ ಇದೆ.

 

ಒಂದು ಕಡೆ ಕರ್ನಾಟಕದಲ್ಲಿಯೇ ಮಳೆ ಇಲ್ಲ. ಆದರೆ ತಮಿಳುನಾಡಿಗೆ ಮಾತ್ರ ಬಿಡಬೇಕಾದ ಕಾವೇರಿ ನೀರನ್ನು ಸರ್ಕಾರ ಬಿಡುತ್ತಲೇ ಇದೆ. ಇದು ಮಂಡ್ಯ ಭಾಗದ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯಕ್ಕೆ ಕೆಆರ್ಎಸ್ ಡ್ಯಾಂನಲ್ಲಿ ಇಂದಿನ ನೀರಿನ ಮಟ್ಟ, 21 ಟಿಎಂಸಿ ನೀರು ಮಾತ್ರ ಇದೆ. ಅದರಲ್ಲಿ 5 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದೆ. ಹೀಗಾಗಿ ಬಳಕೆಗೆ 16 ಟಿಎಂಸಿ ನೀರು ಮಾತ್ರ ಇದೆ.

ಈ ಸಂಬಂಧ‌ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಕರೆಯಲಾಗಿದೆ. ಹೀಗಾಗಿ ಮಂಡ್ಯ ರೈತರ ಕಣ್ಣು ಇಂದಿನ ಸಭೆಯ ಮೇಲೆ ಇದೆ. ತಮಿಳುನಾಡಿಗೆ ನೀರು ಬಿಡುತ್ತಾ ಹೋದರೆ ಖಂಡಿತಾ ರಾಜ್ಯದ ಜನತೆಗೆ ಕುಡಿಯುವ ನೀರಿನ ಸಮಸ್ಯೆಯೂ ಉಂಟಾಗುತ್ತದೆ. ಹೀಗಾಗಿಯೇ ರಾಜ್ಯ ಸರ್ಕಾರದ ಮೇಲೆ ರೈತರು ನೀರು ಬಿಡದಂತೆ ಒತ್ತಡ ಹಾಕುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!