Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯ ಸರ್ಕಾರದ ಮೇಲೆ SC/ST ಅನುದಾನ ಬಳಕೆ ಆರೋಪ : ಮುತ್ತಿಗೆಗೆ ಬಿಜೆಪಿ ಸಿದ್ಧತೆ..!

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತಾವೂ ಭರವಸೆ ನೀಡಿದ್ದ ಗ್ಯಾರಂಟಿಗಳನ್ನೆಲ್ಲಾ ಈಡೇರಿಸುತ್ತಿದೆ. ಆದರೆ ಅದಕ್ಕೆ ಕೋಟ್ಯಾಂತರ ರೂಪಾಯಿ ಹಣವಂತು ಖರ್ಚು ಆಗಿದೆ. ಈ ಹಣವನ್ನೆಲ್ಲಾ SC/ST ಸಮುದಾಯಕ್ಕೆಂದು ನೀಡಬೇಕಿದ್ದ ಅನುದಾನದಿಂದ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿಯ ಮಾಜಿ ಸಚಿವ ಗೋವಿಂದ ಕಾರಜೋಳ ಆರೋಪಿಸಿದ್ದಾರೆ‌.

SC, ST ಸಮುದಾಯಕ್ಕೆ ಮೀಸಲಾದ ಅನುದಾನದಲ್ಲಿ ಸುಮಾರು 11,144 ಕೋಟಿ ಹಣವನ್ನು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಆರೋಪಿಸಿದ ಬೆನ್ನಲ್ಲೇ ಮೂರು ಹಂತದಲ್ಲಿ ಹೋರಾಟ ಮಾಡಲು ಬಿಜೆಪಿ ನಾಯಕರು ಸಜ್ಜಾಗಿದ್ದಾರೆ. SC/ST ಅನುದಾನ ಬಳಕೆ ಮಾಡದಿದ್ದರೆ ಮೂರು ಹಂತದಲ್ಲಿ ಹೋರಾಟ ಮಾಡಿ, ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸೆಪ್ಟೆಂಬರ್ 25ರಿಂದ ಅಕ್ಟೋಬರ್ 10ರ ತನಕ ಮೊದಲ ಹಂತದ ಜನಾಂದೋಲನ, ಅಕ್ಟೋಬರ್ 11 ರಿಂದ 25ರ ತನಕ ಎರಡನೇ ಹಂತದಲ್ಲಿ ಜಿಲ್ಲೆಗಳಲ್ಲಿ ಸಚಿವರು, ಶಾಸಕರಿಗೆ ಮುತ್ತಿಗೆ, ನವೆಂಬರ್ 2ನೇ ವಾರದಲ್ಲಿ ಮೂರನೇ ಹಂತದಲ್ಲಿ ಹರಿಹರದ ಬಿ ಕೃಷ್ಣಪ್ಪ ಅವರ ಸಮಾಧಿಯಿಂದ ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಮುತ್ತುಗೆ ಹಾಕಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಠ್ಯಗಳ ಜೊತೆಗೆ ದಿನಪತ್ರಿಕೆ ಓದುವ ಅಭ್ಯಾಸವಿದ್ದರೆ  ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧ್ಯ : ಡಾ. ಜಿ. ಎನ್. ಸಂದೀಪ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 21 : ಶಾಲಾ ಕಾಲೇಜುಗಳ ಪಠ್ಯಗಳ ಜೊತೆಗೆ ಸಾಮಾನ್ಯ ಜ್ಞಾನಕ್ಕಾಗಿ ದಿನಪತ್ರಿಕೆ ಹಾಗೂ ಮ್ಯಾಗ್ಜಿನ್‍ಗಳನ್ನು ಓದುವ

ಚಿತ್ರದುರ್ಗ | ಜಿಲ್ಲೆಯಲ್ಲಿ ಸೋಮವಾರ ಸುರಿದ ಮಳೆ ವರದಿ

ಚಿತ್ರದುರ್ಗ. ಮೇ.21 :  ಸೋಮವಾರ ರಾತ್ರಿ ಸುರಿದ ಮಳೆಗೆ ಹಿರಿಯೂರು ತಾಲ್ಲೂಕಿನ ಸೂಗೂರಿನಲ್ಲಿ 108.6 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 54.4 ಮಿ.ಮೀ, ಇಕ್ಕನೂರಿನಲ್ಲಿ 68.4

ಮೈಸೂರಿನಲ್ಲಿ ಗಂಡನಿಂದಲೇ ನಟಿ ಹಾಗೂ ಕಾಂಗ್ರೆಸ್ ಮುಖಂಡೆಯ ಭೀಕರ ಹತ್ಯೆ..!

ಕನ್ನಡದ ಕೆಲ ಸಿನಿಮಾಗಳಲ್ಲು ನಟಿಸಿದ್ದ, ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದ ವಿದ್ಯಾ ನಂದೀಶ್ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಲೆಗೆ ಬಲವಾಗಿ ಆಯುಧದಿಂದ

error: Content is protected !!