Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಕುರಿ ಕಾಯುತ್ತಿದ್ದ ಬಸಾಪುರದ ಬಾಲಕನನ್ನು ಮತ್ತೆ ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ..!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ : ಅದೆಷ್ಟೋ ಮಕ್ಕಳು ಇಂದಿಗೂ ಮನೆಯ ಬಡತನಕ್ಕೆ ಬೆಂದು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಅದರಂತೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಸಾಪುರದ ಗ್ರಾಮದಲ್ಲೂ ಬಾಲಕನೊಬ್ಬ ಶಾಲೆಗೆ ಹೋಗದೆ, ಕುರಿ ಮೇಯಿಸುತ್ತಿದ್ದ. ಇದೀಗ ಸಿಎಂ ಸಿದ್ದರಾಮಯ್ಯ ಅವರ ನೆರವಿನಿಂದ ಶಾಲೆಗೆ ಸೇರಿದ್ದಾನೆ.

ಬಸಾಪುರ ಗ್ರಾಮದ ಯೋಗೀಶ್ ಗೆ ಓದುವುದಕ್ಕೆ ಆಸಕ್ತಿ ಇತ್ತು. ಆದರೆ ಅವರ ತಂದೆ ತಾಯಿ ಬಲವಂತವಾಗಿ ಓದು ಬಿಡಿಸಿ, ಕಳೆದ ಎರಡು ವರ್ಷದಿಂದ ಕುರಿ ಮೇಯಿಸಲು ಕಳುಹಿಸಿದ್ದರು.

ಈ ವಿಚಾರ ತಿಳಿದ ಗ್ರಾಮದ ಮಹೇಂದ್ರ ಎಂಬುವಬರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಯೋಗೀಶ್ ಬಗ್ಗೆ ಬರೆದು, ಟ್ಯಾಗ್ ಮಾಡುವ ಮೂಲಕ ಸರ್ಕಾರಕ್ಕೆ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಇದನ್ನು ಗಮನಿಸಿದ ಸಿದ್ದರಾಮಯ್ಯ, ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಚಿತ್ರದುರ್ಗದ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ ಬೆನ್ನಲ್ಲೇ ಬಾಲಕನ ಮನೆಗೆ ತೆರಳಿದ್ದಾರೆ. ಆತನ ತಂದೆ ತಾಯಿಗೆ ಶಿಕ್ಷಣದ ಬಗ್ಗೆ ತಿಳಿಸಿ, ಬಾಲಕನನ್ನು ಶಾಲೆಗೆ ಕಳುಹಿಸುವಂತೆ ಮಾಡಿದ್ದಾರೆ. 24 ಗಂಟೆಯಲ್ಲಿ ಈ ಕೆಲಸವಾಗಿದೆ. ಸದ್ಯ ಯೋಗೀಶ್ 6ನೇ ತರಗತಿಯಲ್ಲಿ ಬಸಾಪುರ ಸರ್ಕಾರಿ ಶಾಲೆಗೆ ಸೇರಿದ್ದಾನೆ. ಮಹೇಂದ್ರ ಅವರಿಗೂ ಸಾಕಷ್ಟು ಜನ ಧನ್ಯವಾದ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

ಹಿರಿಯೂರಿನಲ್ಲಿ ವಕೀಲ ದೇವರಾಜೆಗೌಡ ಬಂಧನ …!

  ಸುದ್ದಿಒನ್, ಹಿರಿಯೂರು, ಮೇ. 10  : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ  ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಹೊಳೆನರಸೀಪುರದಲ್ಲಿ

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

  ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ

error: Content is protected !!