Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗಣೇಶ ಮೂರ್ತಿ ಮೇಲೆ ಚಿತ್ರದುರ್ಗ ನಗರಸಭೆ ಹದ್ದಿನಕಣ್ಣು : ಪೌರಾಯುಕ್ತರು ಹೇಳಿದ್ದೇನು ?

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆ.13: ಪರಿಸರಕ್ಕೆ ಹಾನಿಕಾರಕವಾಗಿರುವ ಪಿಒಪಿ ಮತ್ತು ಲೋಹ ಮಿಶ್ರಿತ ಬಣ್ಣದಿಂದ ತಯಾರಿಸಿದ ವಿಗ್ರಹಗಳ ಬಳಕೆಯನ್ನು  ಸರ್ಕಾರ ನಿಷೇಧಿಸಲಾಗಿದ್ದು, ಪರಿಸರಕ್ಕೆ ಹಾನಿಕಾರವಾಗುವ ಇಂತಹ ವಿಗ್ರಹಗಳ ಮಾರಾಟ ಹಾಗೂ ಬಳಕೆಗೆ ಅವಕಾಶವಿಲ್ಲ ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರಾದ ಎಂ.ರೇಣುಕಾ ಹೇಳಿದರು.

ಪಿಒಪಿ ಗಣೇಶ ವಿಗ್ರಹಗಳ ಮಾರಾಟ ಹಾಗೂ ಬಳಕೆ ಕುರಿತಂತೆ ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಬೆನ್ನಲ್ಲೇ ಚಿತ್ರದುರ್ಗ ನಗರಸಭೆಯ ಅಧಿಕಾರಿಗಳ ತಂಡ ಚಿತ್ರದುರ್ಗ ನಗರದ ವಿವಿಧ ಭಾಗಗಳಲ್ಲಿ ಭೇಟಿ ನೀಡಿ ಪರಸರ ಗಣೇಶೋತ್ಸವ ಹಿನ್ನೆಲೆಯಲ್ಲಿ ಮಣ್ಣಿನ ಗಣೇಶ ಮಾಡಿ, ಯಾವುದೇ ಕಾರಣದಿಂದಾಗಿ ಪಿಒಪಿ ಬಳಸಬೇಡಿ ಎಂದು ಜಾಗೃತಿ ಮೂಡಿಸುವ ಕೆಲಸ ಮಾಡಿದರು.

ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಎಲ್ಲಾ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡುತ್ತಿದ್ದು ಪಿಒಪಿ ಗಣೇಶ ವಿಗ್ರಹಗಳ ಮಾರಾಟ ಅಥವಾ ಬಳಕೆ ಕಂಡುಬಂದಲ್ಲಿ ಕೂಡಲೇ ಅದನ್ನು ವಶಪಡಿಸಿಕೊಳ್ಳಬೇಕು ಎಂದು ಪೌರಾಯುಕ್ತರಾದ ಶ್ರೀಮತಿ ಎಂ. ರೇಣುಕಾ ಅವರು ಹೇಳಿದರು.

ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ನಿರ್ದಿಷ್ಟ ಜಲಮೂಲಗಳನ್ನು ನಿಗದಿಪಡಿಸಲಾಗುತ್ತಿದ್ದು, ಗಣೇಶಮೂರ್ತಿ ವಿಸರ್ಜನೆ ಮಾಡುವ ಸ್ಥಳಗಳ ಕುರಿತು ಸ್ಥಳೀಯವಾಗಿ ಸಾರ್ವಜನಿಕರಿಗೆ ವ್ಯಾಪಕ ಪ್ರಚಾರ ನೀಡುತ್ತೇವೆ,  ಪರಿಸರಕ್ಕೆ ಹಾನಿಯುಂಟು ಮಾಡುವ ವಿಗ್ರಹಗಳನ್ನು ಜಲಮೂಲಗಳಲ್ಲಿ ವಿಸರ್ಜನೆಗೆ ಅವಕಾಶ ನೀಡುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಪರಿಸರ ಅಭಿಯಂತರ ಜಾಫರ್,  ರೆವಿನ್ಯೂ ಇನ್ಸ್‍ಪೆಕ್ಟರ್ ಸಿ.ಮೋಕ್ಷದಾಯಿನಿ, ಯೋಗೇಂದ್ರ, ಆರೋಗ್ಯ ನಿರೀಕ್ಷಕರಾದ ಭಾರತಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಪ್ರಕಾಶ್, ಉಪ ಪರಿಸರ ಅಧಿಕಾರಿಗಳಾದ ರಾಜೇಶ್, ವನ್ಯಜೀವಿ ಮತ್ತು ಪರಿಸರ ಸಂರಕ್ಷಣಾ ವೇದಿಕೆ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್  ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment