Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯಾದ್ಯಂತ 12 ಪಿಒಪಿ ಗಣೇಶ ವಿಗ್ರಹಗಳ ವಶ : ಅಧಿಕಾರಿಗಳ ತೀವ್ರ ನಿಗಾ

Facebook
Twitter
Telegram
WhatsApp

 

 

ಸುದ್ದಿಒನ್, ಚಿತ್ರದುರ್ಗ ಸೆ. 13 : ಪ್ರಸಕ್ತ ವರ್ಷದ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪರಿಸರಕ್ಕೆ ಮಾರಕವಾಗಿರುವ ಪಿಒಪಿ (ಪ್ಲಾಸ್ಟರ್ ಆಫ್ ಪ್ಯಾರಿಸ್) ಗಣೇಶ ಮೂರ್ತಿಗಳ ಮಾರಾಟ ಹಾಗೂ ಬಳಕೆ ಮಾಡದಂತೆ ನಿಷೇಧಿಸಲಾಗಿದ್ದು, ಈ ನಿಟ್ಟಿನಲ್ಲಿ  ಜಿಲ್ಲೆಯಲ್ಲಿ ಅಧಿಕಾರಿಗಳ ತಂಡ ವಿವಿಧೆಡೆ ದಾಳಿ ನಡೆಸಿ, ಒಟ್ಟು 12 ಪಿಒಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಪರಿಸರ ಅಧಿಕಾರಿ ಪ್ರಕಾಶ್ ಅವರು ತಿಳಿಸಿದ್ದಾರೆ.

ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು, ಮಣ್ಣಿನಿಂದ ಮಾಡಿರುವ ಗಣೇಶ ಮೂರ್ತಿಗಳನ್ನು ಬಳಸಬೇಕು, ಪರಿಸರಕ್ಕೆ ಮಾರಕವಾಗಿರುವ ಹಾಗೂ ರಾಸಾಯನಿಕಯುಕ್ತ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ಬಳಸದಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದರು.

ಅಲ್ಲದೆ ಜಿಲ್ಲೆಯಲ್ಲಿ ಈ ಕುರಿತು ನಿಗಾ ವಹಿಸಿ, ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಿ, ಪಿಒಪಿ ಗಣೇಶ ಮೂರ್ತಿಗಳ ಬಳಕೆ ಅಥವಾ ಮಾರಾಟ ಕಂಡುಬಂದಲ್ಲಿ, ಅವುಗಳನ್ನು ವಶಕ್ಕೆ ಪಡೆದು, ಕ್ರಮ ವಹಿಸುವಂತೆ  ನಿರ್ದೇಶನ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮಗಳಲ್ಲಿಯೂ ತೀವ್ರ ನಿಗಾ ವಹಿಸಿದ್ದು, ಜಿಲ್ಲೆಯ ಅಲ್ಲಲ್ಲಿ ದಾಳಿ ನಡೆಸಿ, ನಿಷೇಧಿತ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿ, ಅವುಗಳನ್ನು ವಶಕ್ಕೆ ಪಡೆದುಕೊಂಡಿದೆ.

ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ರೇಣುಕಾ, ಪರಿಸರ ಅಭಿಯಂತರ ಜಾಫರ್, ಪರಿಸರ ಅಧಿಕಾರಿ ಪ್ರಕಾಶ್ ಮುಂತಾದ ಅಧಿಕಾರಿಗಳು, ನಗರದ ವಿವಿಧೆಡೆ ಸಂಚರಿಸಿ, ಮಾರಾಟಕ್ಕೆ ಇರಿಸಿದ್ದ ಹಾಗೂ ಸಾಗಾಣಿಕೆ ಮಾಡಲಾಗುತ್ತಿದ್ದ ಪಿಒಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.

ಅದೇ ರೀತಿ ಹೊಸದುರ್ಗ ತಾಲ್ಲೂಕು ಮಾವಿನಕಟ್ಟೆ ಗ್ರಾಮ ವ್ಯಾಪ್ತಿಯಲ್ಲಿಯೂ 04 ಪಿಒಪಿ ಗಣೇಶ ಮೂರ್ತಿಗಳನ್ನು ಅಲ್ಲಿನ ಪಿಡಿಒ ವಶಕ್ಕೆ ಪಡೆದುಕೊಂಡಿರುತ್ತಾರೆ.

ಜಿಲ್ಲೆಯಲ್ಲಿ ಬುಧವಾರದಂದು ಒಟ್ಟಾರೆ 12 ಪಿಒಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಪರಿಸರಕ್ಕೆ ಹಾನಿಯಾಗದಂತೆ, ನಿಯಮಾನುಸಾರ ವಿಲೇವಾರಿ ಮಾಡಲು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಯಾರೂ ಕೂಡ ಪರಿಸರಕ್ಕೆ ಹಾನಿ ಉಂಟು ಮಾಡುವ ಪಿಒಪಿ ಗಣೇಶ ಮೂರ್ತಿಗಳ ಬಳಕೆ ಮತ್ತು ಮಾರಾಟ ನಿಷೇಧಿಸಲಾಗಿದ್ದು, ಯಾರೂ ಕೂಡ ಗಣೇಶ ಹಬ್ಬಕ್ಕೆ ಪಿಒಪಿ ಗಣೇಶ ವಿಗ್ರಹಗಳನ್ನು ಬಳಸಬಾರದು, ಜೇಡಿ ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣದಿಂದ ಮಾಡಿರುವ ಗಣೇಶ ಮೂರ್ತಿಯನ್ನು ಹಬ್ಬಕ್ಕೆ ಬಳಸಬೇಕು.

ಜಿಲ್ಲೆಯಲ್ಲಿ ಯಾರಾದರೂ ಪಿಒಪಿ ಗಣೇಶ ಮೂರ್ತಿಯನ್ನು ಮಾರಾಟ ಮಾಡುತ್ತಿದ್ದಲ್ಲಿ, ಅಂತಹ ವಿಗ್ರಹಗಳನ್ನು ವಶಕ್ಕೆ ಪಡೆದುಕೊಳ್ಳಲಾಗುವುದು ಎಂದು ಪರಿಸರ ಅಧಿಕಾರಿ ಪ್ರಕಾಶ್ ಅವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

error: Content is protected !!