ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಮೂರು ಪಕ್ಷಗಳು ಹೊಸ ಹೊಸ ಗೇಮ್ ಪ್ಲ್ಯಾನ್ ಮಾಡುತ್ತೇವೆ. ಗೆಲ್ಲುವ ದಾರಿ ಕಂಡುಕೊಳ್ಳುತ್ತಿವೆ. ಆಪರೇಷನ್ ಹಸ್ತ, ಮೈತ್ರಿ ಈ ವಿಚಾರಗಳೇ ಸಾಕಷ್ಟು ಸದ್ದು ಮಾಡುತ್ತಿವೆ. ಈ ಬೆನ್ನಲ್ಲೇ ಅಭ್ಯರ್ಥಿಗಳ ಕ್ಷೇತ್ರ ಆಯ್ಕೆಯೂ ಚರ್ಚೆಯಾಗುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉತ್ತರ ಪ್ರದೇಶದಿಂದ ಸ್ಪರ್ಧಿಸುತ್ತಾರೆ ಎನ್ನಲಾಗಿದೆ.
ಕಾಂಗ್ರೆಸ್ ಕೂಡ ಇದೇ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಅದಕ್ಕೆ ಕಾರಣವೂ ಇದೆ. ಉತ್ತರಪ್ರದೇಶದಲ್ಲಿ ಮಾಯಾವತಿ ಅವರ ಬಿಎಸ್ಪಿ ಪಕ್ಷ ಈಗ ದುರ್ಬಲವಾಗಿದೆಯಂತೆ. ದಲಿತ ಮತಗಳು ಬಿಎಸ್ಪಿ ಪಕ್ಷಕ್ಕೆ ಹೋಗುವುದಿಲ್ಲ ಎಂಬ ಮಾತಿದೆ. ಹೀಗಾಗಿ ದಲಿತ ಮತಗಳನ್ನು ಕಾಂಗ್ರೆಸ್ ನತ್ತ ಸೆಳೆಯುವುದಕ್ಕೆ ಪ್ಲ್ಯಾನ್ ನಡೆಯುತ್ತಿದೆಯಂತೆ. ಒಂದು ವೇಳೆ ಖರ್ಗೆ ಅವರು ಉತ್ತರ ಪ್ರದೇಶದಲ್ಲಿ ಸ್ಪರ್ಧೆ ಮಾಡಿದರೆ ದಲಿತ ಮತಗಳನ್ನು ಕಾಂಗ್ರೆಸ್ ನತ್ತ ಸೆಳೆಯಬಹುದು ಎಂಬುದೇ ಆಗಿದೆ.
ಬಿಜೆಪಿ ಸೋಲಿಸುವುದಕ್ಕೆ ವಿಪಕ್ಷಗಳೆಲ್ಲವೂ ಒಟ್ಟಾಗಿಯೂ ಆಗಿದೆ. ಹೀಗಾಗಿ ಬೇರೆ ಬೇರೆ ಸ್ಟಾಟರ್ಜಿ ಬಳಕೆ ಮಾಡಿಕೊಳ್ಳುತ್ತಿದೆ ಕಾಂಗ್ರೆಸ್. ಇನ್ನು ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರ ಪ್ರದೇಶದಿಂದಾನೇ ಸ್ಪರ್ಧೆ ಮಾಡುವುದು ಖಚಿತವಾದರೆ ಇಟವಾ ಅಥವಾ ಬಾರಬಂಕಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗ್ತಿದೆ. ಈ ಕ್ಷೇತ್ರದಲ್ಲಿ ಖರ್ಗೆ ಅವರು ಸ್ಪರ್ಧಿಸಿದರೆ ದಲಿತ ಮತಗಳನ್ನು ಕ್ರೋಢೀಕರಿಸಬೇಕಾಗಿದೆ. ಅದಕ್ಕೆ ಸಮಾಜವಾದಿ ಪಕ್ಷದ ಬೆಂಬಲವೂ ಅಗತ್ಯವಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್