Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚೈತ್ರಾ ಕುಂದಾಪುರ ಕೇಸಲ್ಲಿ ಹೊಸ ಟ್ವಿಸ್ಟ್ : ಸತ್ಯ ಒಪ್ಪಿಕೊಂಡ ಆರೋಪಿಗಳು ಹೇಳಿದ್ದೇನು..?

---Advertisement---

 

 

ಬೆಂಗಳೂರು: ಉದ್ಯಮಿಗೆ ಮೋಸ ಮಾಡಿದ ಆರೋಪದ ಮೇಲೆ ಚೈತ್ರಾ ಕುಂದಾಪುರ ಈಗ ಸಿಸಿಬಿ ವಶದಲ್ಲಿದ್ದಾಳೆ. ತನಿಖೆ ನಡೆಸುತ್ತಿರುವ ಪೊಲೀಸರಿಗೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಸದ್ಯ ಆರೋಪಿಗಳು ಹಣ ಪಡೆದಿರುವುದನ್ನು ಒಪ್ಪಿಕೊಂಡಿದ್ದಾರೆ. ಅದು ಐದು ಕೋಟಿ ಅಲ್ಲ ಮೂರು ಕೋಟಿ ಬಗ್ಗೆ ಬಾಯ್ಬಿಟ್ಟಿದ್ದಾರೆ.

ಪ್ರಕರಣದ ಏಳನೇ ಆರೋಪಿಯಾಗಿರುವ ಶ್ರೀಕಾಂತ್ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಗೋವಿಂದ ಬಾಬು ಅವರಿಂದ ನಾನೇ ಹಣ ತೆಗೆದುಕೊಂಡು, ಚೈತ್ರಾ ಹಾಗೂ ಗಗನ್ ಗೆ ನೀಡಿದ್ದೇನೆ. ಆದರೆ ಆ ಹಣ ಬಳಿಕ ಏನಾಯಿತು ಎಂಬುದು ಗೊತ್ತಿಲ್ಲ ಎಂದೇ ಗ್ಯಾಂಗ್ ಹೇಳುತ್ತಿದೆಯಂತೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಟು ಜನ ಆರೋಪಿಗಳು ಲಾಕ್ ಆಗಿದ್ದಾರೆ.

ಪೊಲೀಸರು ತನಿಖೆ ನಡೆಸುತ್ತಿದ್ದು, ವಿಚಾರಣೆಯನ್ನು ತೀವ್ರವಾಗಿ ನಡೆಸುತ್ತಿದ್ದಾರೆ. ಇದೀಗ ಆರೋಪಿಗಳ ಮೊಬೈಲ್ ಗಳನ್ನು ರಿಟ್ರೀವ್ ಮಾಡಲು ಎಫ್ಎಸ್ಎಲ್ ಗೆ ಕಳುಹಿಸಿದ್ದಾರೆ. ವರದಿ ಬಂದ ಬಳಿಕ, ಡಿಲೀಟ್ ಆದ ಮೆಸೇಜ್ ಗಳು ಸಿಕ್ಕ ಬಳಿಕ ಸತ್ಯ ತಿಳಿಯಲಿದೆ.

ಗೋವಿಂದ ಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ಕೊಡುವುದಾಗಿ ಚೈತ್ರಾ ಐದು ಕೋಟಿ ಮೋಸ ಮಾಡಿದ್ದಾರೆ ಎನ್ನಲಾಗಿದೆ. ಆದ್ರೆ ಈಗ ಚೈತ್ರಾ ಗ್ಯಾಂಗ್ ಮೂರು ಕೋಟಿ ತೆಗೆದುಕೊಂಡಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಹಾಲಶ್ರೀ ಸ್ವಾಮೀಜಿಯ ಹೆಸರು ಬೇರೆ ಕೇಳಿ ಬಂದಿದೆ. ಅದರ ಜೊತೆಗೆ ಗೋವಿಂದ ಬಾಬುಗೆ ಇಂದಿರಾ ಕ್ಯಾಂಟೀನ್ ಕಾಂಟ್ಯಾಕ್ಟ್ ಹಣ ಬರಬೇಕು, ಅದಕ್ಕೆ ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಚೈತ್ರಾಳೆ ಹೇಳಿದ್ದಳು. ಆದರೆ ಗೋವಿಂದ ಬಾಬು ಇದನ್ನು ತಳ್ಳಿ ಹಾಕಿದ್ದಾರೆ. ಇದಕ್ಕೂ ಅದಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...