Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚೈತ್ರಾ ಪರ ಬ್ಯಾಟ್ ಬೀಸಿದ ಪ್ರಮೋದ್ ಮುತಾಲಿಕ್..!

---Advertisement---

ಧಾರವಾಡ: ಉದ್ಯಮಿಯೊಬ್ಬರಿಗೆ 5 ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿರುವ ಚೈತ್ರಾಗೆ ಅನಾರೋಗ್ಯವೂ ಕಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಹೊಸ ವಿಚಾರಗಳು ಹೊರಗೆ ಬರುತ್ತಿವೆ. ಇದೀಗ ಚೈತ್ರಾ ಕುಂದಾಪುರ ಪರ ಪ್ರಮೋದ್ ಮುತಾಲಿಕ್ ಬ್ಯಾಟ್ ಬೀಸಿದ್ದಾರೆ.

ಚೈತ್ರಾ ಕುಂದಾಪುರ ಈ ವಂಚನೆ ಮಾಡಿಲ್ಲ ಎಂಬ ನಂಬಿಕೆ ಇದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ತನಿಖೆಯಾಗಲಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಎಲ್ಲೋ ಒಂದು ಕಡೆ ಷಡ್ಯಂತ್ರ ನಡೆದಿದೆ ಎನಿಸುತ್ತಿದ. ಚೈತ್ರಾ ಷಡ್ಯಂತ್ರಕ್ಕೆ ಒಳಗಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಿಂದೂ ಕಾರ್ಯಕರ್ತರನ್ನು ಸಿಲುಕಿಸುವ ಹುನ್ನಾರ ನಡೆಯುತ್ತಿದೆ ಎನಿಸುತ್ತಿದೆ.

ಭಜರಂಗದಳದವರನ್ನು ಬ್ಯಾನ್ ಮಾಡುತ್ತೇವೆ, ಗೋಹತ್ಯೆ ಮತ್ತು ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸ್ ಪಡೆಯುತ್ತೇವೆ ಎಂಬ ಭರವಸೆಗಳನ್ನು ಕಾಂಗ್ರೆಸ್ ನವರು ತಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದರು. ಭಜರಂಗದಳ ಒಂದು ನೆಪ ಮಾತ್ರ. ಹಿಂದೂಪರ ಸಂಘಟನೆಗಳನ್ನೇ ಮಾಡುತ್ತಿದ್ದಾರೆ. ಪುನೀತ್ ಕೆರೆಹಳ್ಳಿ ಮೇಲೆ ಗುಂಡಾ ಕಾಯ್ದ ಹಾಕಲಾಗಿದೆ. ಈ ಕಾಯ್ದೆ ಹಾಕುವ ಅವಶ್ಯಕತೆ ಇರಲಿಲ್ಲ. ರಾಜ್ಯದಲ್ಲಿ ಇನ್ನು ಅನೇಕ ಹಿಂದೂ ಕಾರ್ಯಕರ್ತರ ವಿರುದ್ಧ ಈ ಬಾರಿ ರೀತಿ ಪಿತೂರಿ ನಡೆಯುತ್ತಿದೆ ಎಂದಿದ್ದಾರೆ.

ಚೈತ್ರಾ ಕುಂದಾಪುರ ಹಿಂದೆ ಸಂಶಯಾಸ್ಪದ ಚಟುವಟಿಕೆಗಳು ನಡೆದಿವೆ. ಕೋರ್ಟ್ ಏನು ತೀರ್ಪು ಕೊಡುತ್ತೆ ಅದಕ್ಕೆ ನಾವೂ ಬದ್ಧರಾಗಿದ್ದೇವೆ. ಹಾಲಪ್ಪಾಜಿ ಅವರ ಹೆಸರು ಈ ಪ್ರಕರಣದಲ್ಲಿ ಕೇಳಿ ಬಂದಿದೆ. ಆ ಸ್ವಾಮೀಜಿಯವರನ್ನು ನಾವೂ ಹತ್ತಿರದಿಂದ ನೋಡಿದ್ದೇವೆ. ಅವರದ್ದು ದೊಡ್ಡ ಮಠ. ಅವರೂ ನಿರ್ದೋಷಿಯಾಗಿ ಹೊರ ಬರುತ್ತಾರೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment